ಭಾರತ ಸರ್ಕಾರದ ನಿರ್ದೇಶಕರು, ಸಾಮಾಜಿಕ ನ್ಯಾಯ ಸಚಿವಾಲಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆವತಿಯಿಂದ ಪ್ರಿ-ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ನವೆಂಬರ್ 30 ರೊಳಗೆ ಹಾಗೂ ಪೋಸ್ಟ್ ಮೆಟ್ರಿಕ್, ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರ ವರೆಗೆ ದಿನಾಂಕ ನಿಗದಿಪಡಿಸಲಾಗಿದೆ.
ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಕಲಚೇತನರು ವ್ಯಾಸಂಗ ಮಾಡುತ್ತಿರುವ ಶಾಲಾ ಕಾಲೇಜುಗಳ ಮೂಲಕ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ ಆಯಾ ಶಾಲಾ ಕಾಲೇಜುಗಳವರು ಕೇಂದ್ರ ಸರ್ಕಾರದ ಪೋರ್ಟಲ್ ಮೂಲಕ ದಾಖಲಿಸಬೇಕಾಗಿರುತ್ತದೆ.
9 ಮತ್ತು 10ನೇ ತರಗತಿಯ ವಿಕಲಚೇತನ ವಿದ್ಯಾರ್ಥಿಗಳು NSP Portal ಮೂಲಕ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಸಂಬಧಪಟ್ಟ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ (ಸಾರ್ವಜನಿಕ ಶಿಕ್ಷಣ ಇಲಾಖೆ) ಇಲಾಖೆಯ ಉಪ ನಿರ್ದೇಶಕರು ಹಾಗೂ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು, ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು, ವಿಶ್ವವಿದ್ಯಾನಿಲಯಗಳ ಮುಖ್ಯಸ್ಥರೊಂದಿಗೆ ಸಮನ್ವಯತೆಯನ್ನು ಸಾಧಿಸಿ ಹೆಚ್ಚಿನ ಸಂಖ್ಯೆಯ ವಿಕಲಚೇತನ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ (https://scholarships.gov.in/) ತಾಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…
There are many benefits to playing at real money casino sites. Whether you are looking…
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…