ರಾಷ್ಟ್ರೀಯ ವಿದ್ಯುತ್ ಸುರಕ್ಷಾ ಸಪ್ತಾಹದ ಅಂಗವಾಗಿ ಇಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ದೊಡ್ಡಬಳ್ಳಾಪುರ ಇವರಿಂದ ಸುರಕ್ಷತಾ ಜಾಥವನ್ನು ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.
ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಪವರ್ ಮೆನ್ ಗಳು ಜಾಥವನ್ನು ನಡೆಸಿ ಸುರಕ್ಷತೆಯ ಘೋಷಣಾ ವಾಕ್ಯಗಳನ್ನು ಕೂಗುತ್ತಾ ಜನರಿಗೆ ವಿದ್ಯುತ್ತನ್ನು ಬಳಸುವಾಗ ಯಾವ ರೀತಿ ಎಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಈ ಜಾಥವನ್ನು ಬೆವಿಕಂ ನೆಲಮಂಗಲ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಕುಮಾರನಾಯಕ್ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಮತ್ತು ನಗರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿನಯ್ ಕುಮಾರ್ ನೇತೃತ್ವದಲ್ಲಿ ನಡೆಯಿತು.
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾ ಶ್ರೀ ಹಾಗೂ ನಗರಸಭೆಯ ಪೌರಾಯುಕ್ತ ಕಾರ್ತಿಕೇಶ್ವರ್ ರವರು ಈ ಸುರಕ್ಷತಾ ಜಾಥದಲ್ಲಿ ಪಾಲ್ಗೊಂಡಿದ್ದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…