ರಾಷ್ಟ್ರೀಯ ವಿದ್ಯುತ್ ಸುರಕ್ಷಾ ಸಪ್ತಾಹದ ಅಂಗವಾಗಿ ಇಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ದೊಡ್ಡಬಳ್ಳಾಪುರ ಇವರಿಂದ ಸುರಕ್ಷತಾ ಜಾಥವನ್ನು ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.
ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಪವರ್ ಮೆನ್ ಗಳು ಜಾಥವನ್ನು ನಡೆಸಿ ಸುರಕ್ಷತೆಯ ಘೋಷಣಾ ವಾಕ್ಯಗಳನ್ನು ಕೂಗುತ್ತಾ ಜನರಿಗೆ ವಿದ್ಯುತ್ತನ್ನು ಬಳಸುವಾಗ ಯಾವ ರೀತಿ ಎಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಈ ಜಾಥವನ್ನು ಬೆವಿಕಂ ನೆಲಮಂಗಲ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಕುಮಾರನಾಯಕ್ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಮತ್ತು ನಗರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿನಯ್ ಕುಮಾರ್ ನೇತೃತ್ವದಲ್ಲಿ ನಡೆಯಿತು.
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾ ಶ್ರೀ ಹಾಗೂ ನಗರಸಭೆಯ ಪೌರಾಯುಕ್ತ ಕಾರ್ತಿಕೇಶ್ವರ್ ರವರು ಈ ಸುರಕ್ಷತಾ ಜಾಥದಲ್ಲಿ ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…