IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.
ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು.
ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದೆ.
ಐಐಟಿ ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು ಎಂದು ಮಾನ್ಯ ಸಚಿವರು ತಿಳಿಸಿದರು.
ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ.
ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆಯನ್ನು ಮಾಡಿರುತ್ತದೆ.
ಹೀಗಾಗಿ ಬಾಬಾ ಸಾಹೇಬರ ಆಶಯದಂತೆ ನಮ್ಮೆಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕೆಂದು ಸಚಿವರು ಆಶಯವನ್ನು ವ್ಯಕ್ತಪಡಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…