ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ

IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.

ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು.

ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದೆ.

ಐಐಟಿ ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು ಎಂದು ಮಾನ್ಯ ಸಚಿವರು ತಿಳಿಸಿದರು.

ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ.

ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆಯನ್ನು ಮಾಡಿರುತ್ತದೆ.

ಹೀಗಾಗಿ ಬಾಬಾ ಸಾಹೇಬರ ಆಶಯದಂತೆ ನಮ್ಮೆಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕೆಂದು ಸಚಿವರು ಆಶಯವನ್ನು ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago