ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗ (ರಿ) ವತಿಯಿಂದ, ಶ್ರೀ ಕ್ಷೇತ್ರ ಧರ್ಮಸ್ಥಳದ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ‘ಸಾಹಿತ್ಯ ಸೌರಭ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕವಿ ರವಿಕುಮಾರ್ ಕೆ.ಎಂ. ಅವರ ಚೊಚ್ಚಲ ಕವನ ಸಂಕಲನ ‘ಅಂಚಿನ ತೊರೆ’ ಲೋಕಾರ್ಪಣೆಗೊಂಡಿತು.
ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದ ಅಧ್ಯಕ್ಷ ಮಣ್ಣೆ ಮೋಹನ್ ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಂದ್ರ ಅಡಿಗ ಅವರು ಕೃತಿಯನ್ನು ಲೋಕಾರ್ಪಣೆ ಮಾಡಿ ಲೇಖಕರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಹೊಸ ತಲೆಮಾರಿನ ಕವಿಗಳು ಸಮಾಜಮುಖಿ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯವನ್ನು ಇನ್ನಷ್ಟು ಶ್ರೀಮಂತಗೊಳಿಸುವ ಕೆಲಸ ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಕವಿ ರವಿಕುಮಾರ್ ಕೆ.ಎಂ. ಅವರು ಮಾತನಾಡಿ, ತಮ್ಮ ಚೊಚ್ಚಲ ಕವನ ಸಂಕಲನದ ಲೋಕಾರ್ಪಣೆ ಸಾಹಿತ್ಯ ಜೀವನದ ಮಹತ್ವದ ಮೈಲಿಗಲ್ಲಾಗಿದ್ದು, ಈ ಗೌರವಕ್ಕೆ ಕಾರಣರಾದ ಆಯೋಜಕರು, ಗಣ್ಯರು ಹಾಗೂ ಸಾಹಿತ್ಯಾಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರದ ನಾರಾಯಣಸ್ವಾಮಿ ಎಂ., ಮಹೇಶ್ ದಶಮನಿ, ರವಿಕುಮಾರ್ ಅದ್ದೇಕೊಪ್ಪ, ಅನಿಲ್ ಸೇರಿದಂತೆ ಅನೇಕ ಕವಿಗಳು, ಲೇಖಕರು, ಸಾಹಿತ್ಯಾಸಕ್ತರು, ಗಣ್ಯರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದು, ‘ಅಂಚಿನ ತೊರೆ’ ಕೃತಿಯ ಯಶಸ್ಸಿಗೆ ಶುಭ ಹಾರೈಸಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…