ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮತ್ತು ಪರಿಪೂರ್ಣ ವ್ಯಕ್ತಿತ್ವವನ್ನು ಮೂಡಿಸಲು ಸಹಕಾರಿ; ಪಿ.ಗೋವಿಂದ ರಾಜು

ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮತ್ತು ಪರಿಪೂರ್ಣ ವ್ಯಕ್ತಿತ್ವವನ್ನು ಮೂಡಿಸಲು ಸಹಕಾರಿ ಆಗುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ನಾರನಹಳ್ಳಿ ಗ್ರಾಮದಲ್ಲಿ ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಸಮುದಾಯದ ನಡುವೆ ಕಲಿಯುವ ಅನುಭವ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಮಾನವೀಯ ಸಂಬಂಧಗಳನ್ನು ವೃದ್ಧಿಸುತ್ತದೆ. ನಿಸ್ವಾರ್ಥ ಸೇವಾಮನೋಭಾವ ಸಂತೋಷವನ್ನು ನೀಡುತ್ತದೆ ಎಂದರು.

ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಎಸ್.ಸುನೀತ ಮಾತನಾಡಿ, ಮಹಾತ್ಮಗಾಂಧಿ ಅವರ 100ನೇ ಜನ್ಮ ದಿನದಂದು ರಾಷ್ಟ್ರೀಯ ಸೇವಾ ಯೋಜನೆಯನ್ನು 1969ರಲ್ಲಿ ಪ್ರಾರಂಭಲಾಗಿದೆ. ಸಮಾಜಸೇವೆಯಲ್ಲಿ ಮಹಾತ್ಮಗಾಂಧಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡವರು. ಅವರ ನೆನಪಿನಲ್ಲಿ ರೂಪಿಸುವ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಸರ್ವಾಂಗೀಣ ‌ವ್ಯಕ್ತಿತ್ವ ವಿಕಸನಕ್ಕೆ ಸಹಾಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ಭಾವೈಕ್ಯತೆ ಮತ್ತು ಸಹಬಾಳ್ವೆಯನ್ನು ಕಲಿಯಲು ಶಿಬಿರ ಸಹಕಾರಿ ಆಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಟಿ.ಆರ್.ಶ್ರೀರಾಮೇಗೌಡ, ಕನ್ನಡಪರ ಹೋರಾಟಗಾರ ಹನುಮಂತರೆಡ್ಡಿ, ಹಾದ್ರಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಶಿಲ್ಪಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಾನಂದ, ಮಾಜಿ ಅಧ್ಯಕ್ಷ ಕೆಂಪೇಗೌಡ, ಗ್ರಾಮದ ಮುಖಂಡ ರಾಜಕುಮಾರ್, ಬಸವರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಸಿಬ್ಬಂದಿ ರಂಗಾಚಾರ್, ಶಿಕ್ಷಕಿ ಭಾರತಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕೇಶವಮೂರ್ತಿ, ಕಾಲೇಜಿನ ಉಪನ್ಯಾಸಕರು ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದರು

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

10 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

15 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago