ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮತ್ತು ಪರಿಪೂರ್ಣ ವ್ಯಕ್ತಿತ್ವವನ್ನು ಮೂಡಿಸಲು ಸಹಕಾರಿ ಆಗುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ನಾರನಹಳ್ಳಿ ಗ್ರಾಮದಲ್ಲಿ ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಸಮುದಾಯದ ನಡುವೆ ಕಲಿಯುವ ಅನುಭವ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಮಾನವೀಯ ಸಂಬಂಧಗಳನ್ನು ವೃದ್ಧಿಸುತ್ತದೆ. ನಿಸ್ವಾರ್ಥ ಸೇವಾಮನೋಭಾವ ಸಂತೋಷವನ್ನು ನೀಡುತ್ತದೆ ಎಂದರು.
ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಎಸ್.ಸುನೀತ ಮಾತನಾಡಿ, ಮಹಾತ್ಮಗಾಂಧಿ ಅವರ 100ನೇ ಜನ್ಮ ದಿನದಂದು ರಾಷ್ಟ್ರೀಯ ಸೇವಾ ಯೋಜನೆಯನ್ನು 1969ರಲ್ಲಿ ಪ್ರಾರಂಭಲಾಗಿದೆ. ಸಮಾಜಸೇವೆಯಲ್ಲಿ ಮಹಾತ್ಮಗಾಂಧಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡವರು. ಅವರ ನೆನಪಿನಲ್ಲಿ ರೂಪಿಸುವ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಸಹಾಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ಭಾವೈಕ್ಯತೆ ಮತ್ತು ಸಹಬಾಳ್ವೆಯನ್ನು ಕಲಿಯಲು ಶಿಬಿರ ಸಹಕಾರಿ ಆಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಟಿ.ಆರ್.ಶ್ರೀರಾಮೇಗೌಡ, ಕನ್ನಡಪರ ಹೋರಾಟಗಾರ ಹನುಮಂತರೆಡ್ಡಿ, ಹಾದ್ರಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಶಿಲ್ಪಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಾನಂದ, ಮಾಜಿ ಅಧ್ಯಕ್ಷ ಕೆಂಪೇಗೌಡ, ಗ್ರಾಮದ ಮುಖಂಡ ರಾಜಕುಮಾರ್, ಬಸವರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಸಿಬ್ಬಂದಿ ರಂಗಾಚಾರ್, ಶಿಕ್ಷಕಿ ಭಾರತಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕೇಶವಮೂರ್ತಿ, ಕಾಲೇಜಿನ ಉಪನ್ಯಾಸಕರು ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದರು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…