ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಸ್ಪೃಶ್ಯತೆ ಆಚರಣೆ- ಗೂಳ್ಯ ಹನುಮಣ್ಣ ಆರೋಪ

ಆಹ್ವಾನ ಪತ್ರಿಕೆಯಲ್ಲಿ ಡಾ.ಬಿಆರ್.ಅಂಬೇಡ್ಕರ್ ರಸ್ತೆ ಬದಲಿಗೆ ಜಿ.ರಾಮೇಗೌಡ ರಸ್ತೆ ಎಂದು ಮುದ್ರಣ ಮಾಡುವ ಮೂಲಕ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಸ್ಪೃಶ್ಯತೆ ಆಚರಣೆ ಮಾಡಿದೆ ಎಂದು ಪ್ರಜಾ ವಿಮೋಚಾನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ ಆರೋಪಿಸಿದ್ದಾರೆ.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಅವರ 513ನೇ ಜನ್ಮದಿನಾಚರಣೆ ಸಮಾರಂಭವನ್ನು ಆಯೋಜನೆ ಮಾಡಿದೆ.

ಸಮಾರಂಭ ನಡೆಯುವ ಒಕ್ಕಲಿಗರ ಭವನವು ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿದೆ, ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಿ ಸುಮಾರು 30 ವರ್ಷಗಳು ಕಳೆದಿವೆ, ಅಂದಿನ ಪುರಸಭೆಯಲ್ಲಿ ಚರ್ಚೆ ಮಾಡಿ ಅಂಗೀಕರಿಸಿದೆ, ತಾಲ್ಲೂಕು ಕಚೇರಿ ಇರುವ ಬಸವೇಶ್ವರ ವೃತ್ತದಲ್ಲಿ ಕಳೆದ ವರ್ಷ ನಗರಸಭೆ ವತಿಯಿಂದ ನಾಮ ಫಲಕವನ್ನೂ ಹಾಕಲಾಗಿದೆ, ಆದರೂ ಪ್ರತಿ ಕಾರ್ಯಕ್ರಮಗಳು ನಡೆದಾಗ ತಾಲ್ಲೂಕು ಆಡಳಿತ ಸೇರಿದಂತೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ರಸ್ತೆಯ ಹೆಸರನ್ನು ಪದೇ ಪದೇ ವಿವಾದಗೊಳಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ದೇಶಕ್ಕೆ ಸಂವಿಧಾನವನ್ನು ಬರೆದು ಕೊಟ್ಟವರು, ಅಂಬೇಡ್ಕರ್ ಜಯಂತಿಯನ್ನು ವಿಶ್ವ ಜ್ಞಾನದ ದಿನ ಎಂದು 194 ದೇಶಗಳಲ್ಲಿ ಆಚರಣೆ ಮಾಡಲಾಗುತ್ತದೆ ಆದರೆ, ಈ ಶಾಪಗ್ರಸ್ತ ದೇಶ ಮಾತ್ರ ಬಾಬಾಸಾಹೇಬರನ್ನು ಜಾತಿಯ ಪಂಜರದಲ್ಲಿ ಬಂದಿಸಿದೆ ಎಂದರು.

ಈ ಕೂಡಲೇ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಹ್ವಾನ ಪತ್ರಿಕೆಯನ್ನು ಬದಲಾಯಿಸಬೇಕು ತಪ್ಪಿದಲ್ಲಿ ನಾಳೆಯ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

47 minutes ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

3 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

6 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

17 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

17 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

21 hours ago