ಆಹ್ವಾನ ಪತ್ರಿಕೆಯಲ್ಲಿ ಡಾ.ಬಿಆರ್.ಅಂಬೇಡ್ಕರ್ ರಸ್ತೆ ಬದಲಿಗೆ ಜಿ.ರಾಮೇಗೌಡ ರಸ್ತೆ ಎಂದು ಮುದ್ರಣ ಮಾಡುವ ಮೂಲಕ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಸ್ಪೃಶ್ಯತೆ ಆಚರಣೆ ಮಾಡಿದೆ ಎಂದು ಪ್ರಜಾ ವಿಮೋಚಾನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ ಆರೋಪಿಸಿದ್ದಾರೆ.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಅವರ 513ನೇ ಜನ್ಮದಿನಾಚರಣೆ ಸಮಾರಂಭವನ್ನು ಆಯೋಜನೆ ಮಾಡಿದೆ.
ಸಮಾರಂಭ ನಡೆಯುವ ಒಕ್ಕಲಿಗರ ಭವನವು ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿದೆ, ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಿ ಸುಮಾರು 30 ವರ್ಷಗಳು ಕಳೆದಿವೆ, ಅಂದಿನ ಪುರಸಭೆಯಲ್ಲಿ ಚರ್ಚೆ ಮಾಡಿ ಅಂಗೀಕರಿಸಿದೆ, ತಾಲ್ಲೂಕು ಕಚೇರಿ ಇರುವ ಬಸವೇಶ್ವರ ವೃತ್ತದಲ್ಲಿ ಕಳೆದ ವರ್ಷ ನಗರಸಭೆ ವತಿಯಿಂದ ನಾಮ ಫಲಕವನ್ನೂ ಹಾಕಲಾಗಿದೆ, ಆದರೂ ಪ್ರತಿ ಕಾರ್ಯಕ್ರಮಗಳು ನಡೆದಾಗ ತಾಲ್ಲೂಕು ಆಡಳಿತ ಸೇರಿದಂತೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ರಸ್ತೆಯ ಹೆಸರನ್ನು ಪದೇ ಪದೇ ವಿವಾದಗೊಳಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ದೇಶಕ್ಕೆ ಸಂವಿಧಾನವನ್ನು ಬರೆದು ಕೊಟ್ಟವರು, ಅಂಬೇಡ್ಕರ್ ಜಯಂತಿಯನ್ನು ವಿಶ್ವ ಜ್ಞಾನದ ದಿನ ಎಂದು 194 ದೇಶಗಳಲ್ಲಿ ಆಚರಣೆ ಮಾಡಲಾಗುತ್ತದೆ ಆದರೆ, ಈ ಶಾಪಗ್ರಸ್ತ ದೇಶ ಮಾತ್ರ ಬಾಬಾಸಾಹೇಬರನ್ನು ಜಾತಿಯ ಪಂಜರದಲ್ಲಿ ಬಂದಿಸಿದೆ ಎಂದರು.
ಈ ಕೂಡಲೇ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಹ್ವಾನ ಪತ್ರಿಕೆಯನ್ನು ಬದಲಾಯಿಸಬೇಕು ತಪ್ಪಿದಲ್ಲಿ ನಾಳೆಯ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…