ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಸ್ಪೃಶ್ಯತೆ ಆಚರಣೆ- ಗೂಳ್ಯ ಹನುಮಣ್ಣ ಆರೋಪ

ಆಹ್ವಾನ ಪತ್ರಿಕೆಯಲ್ಲಿ ಡಾ.ಬಿಆರ್.ಅಂಬೇಡ್ಕರ್ ರಸ್ತೆ ಬದಲಿಗೆ ಜಿ.ರಾಮೇಗೌಡ ರಸ್ತೆ ಎಂದು ಮುದ್ರಣ ಮಾಡುವ ಮೂಲಕ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಸ್ಪೃಶ್ಯತೆ ಆಚರಣೆ ಮಾಡಿದೆ ಎಂದು ಪ್ರಜಾ ವಿಮೋಚಾನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ ಆರೋಪಿಸಿದ್ದಾರೆ.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಅವರ 513ನೇ ಜನ್ಮದಿನಾಚರಣೆ ಸಮಾರಂಭವನ್ನು ಆಯೋಜನೆ ಮಾಡಿದೆ.

ಸಮಾರಂಭ ನಡೆಯುವ ಒಕ್ಕಲಿಗರ ಭವನವು ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿದೆ, ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಿ ಸುಮಾರು 30 ವರ್ಷಗಳು ಕಳೆದಿವೆ, ಅಂದಿನ ಪುರಸಭೆಯಲ್ಲಿ ಚರ್ಚೆ ಮಾಡಿ ಅಂಗೀಕರಿಸಿದೆ, ತಾಲ್ಲೂಕು ಕಚೇರಿ ಇರುವ ಬಸವೇಶ್ವರ ವೃತ್ತದಲ್ಲಿ ಕಳೆದ ವರ್ಷ ನಗರಸಭೆ ವತಿಯಿಂದ ನಾಮ ಫಲಕವನ್ನೂ ಹಾಕಲಾಗಿದೆ, ಆದರೂ ಪ್ರತಿ ಕಾರ್ಯಕ್ರಮಗಳು ನಡೆದಾಗ ತಾಲ್ಲೂಕು ಆಡಳಿತ ಸೇರಿದಂತೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ರಸ್ತೆಯ ಹೆಸರನ್ನು ಪದೇ ಪದೇ ವಿವಾದಗೊಳಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ದೇಶಕ್ಕೆ ಸಂವಿಧಾನವನ್ನು ಬರೆದು ಕೊಟ್ಟವರು, ಅಂಬೇಡ್ಕರ್ ಜಯಂತಿಯನ್ನು ವಿಶ್ವ ಜ್ಞಾನದ ದಿನ ಎಂದು 194 ದೇಶಗಳಲ್ಲಿ ಆಚರಣೆ ಮಾಡಲಾಗುತ್ತದೆ ಆದರೆ, ಈ ಶಾಪಗ್ರಸ್ತ ದೇಶ ಮಾತ್ರ ಬಾಬಾಸಾಹೇಬರನ್ನು ಜಾತಿಯ ಪಂಜರದಲ್ಲಿ ಬಂದಿಸಿದೆ ಎಂದರು.

ಈ ಕೂಡಲೇ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಹ್ವಾನ ಪತ್ರಿಕೆಯನ್ನು ಬದಲಾಯಿಸಬೇಕು ತಪ್ಪಿದಲ್ಲಿ ನಾಳೆಯ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago