ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಸ್ಪೃಶ್ಯತೆ ಆಚರಣೆ- ಗೂಳ್ಯ ಹನುಮಣ್ಣ ಆರೋಪ

ಆಹ್ವಾನ ಪತ್ರಿಕೆಯಲ್ಲಿ ಡಾ.ಬಿಆರ್.ಅಂಬೇಡ್ಕರ್ ರಸ್ತೆ ಬದಲಿಗೆ ಜಿ.ರಾಮೇಗೌಡ ರಸ್ತೆ ಎಂದು ಮುದ್ರಣ ಮಾಡುವ ಮೂಲಕ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಸ್ಪೃಶ್ಯತೆ ಆಚರಣೆ ಮಾಡಿದೆ ಎಂದು ಪ್ರಜಾ ವಿಮೋಚಾನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ ಆರೋಪಿಸಿದ್ದಾರೆ.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಅವರ 513ನೇ ಜನ್ಮದಿನಾಚರಣೆ ಸಮಾರಂಭವನ್ನು ಆಯೋಜನೆ ಮಾಡಿದೆ.

ಸಮಾರಂಭ ನಡೆಯುವ ಒಕ್ಕಲಿಗರ ಭವನವು ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿದೆ, ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಿ ಸುಮಾರು 30 ವರ್ಷಗಳು ಕಳೆದಿವೆ, ಅಂದಿನ ಪುರಸಭೆಯಲ್ಲಿ ಚರ್ಚೆ ಮಾಡಿ ಅಂಗೀಕರಿಸಿದೆ, ತಾಲ್ಲೂಕು ಕಚೇರಿ ಇರುವ ಬಸವೇಶ್ವರ ವೃತ್ತದಲ್ಲಿ ಕಳೆದ ವರ್ಷ ನಗರಸಭೆ ವತಿಯಿಂದ ನಾಮ ಫಲಕವನ್ನೂ ಹಾಕಲಾಗಿದೆ, ಆದರೂ ಪ್ರತಿ ಕಾರ್ಯಕ್ರಮಗಳು ನಡೆದಾಗ ತಾಲ್ಲೂಕು ಆಡಳಿತ ಸೇರಿದಂತೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ರಸ್ತೆಯ ಹೆಸರನ್ನು ಪದೇ ಪದೇ ವಿವಾದಗೊಳಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ದೇಶಕ್ಕೆ ಸಂವಿಧಾನವನ್ನು ಬರೆದು ಕೊಟ್ಟವರು, ಅಂಬೇಡ್ಕರ್ ಜಯಂತಿಯನ್ನು ವಿಶ್ವ ಜ್ಞಾನದ ದಿನ ಎಂದು 194 ದೇಶಗಳಲ್ಲಿ ಆಚರಣೆ ಮಾಡಲಾಗುತ್ತದೆ ಆದರೆ, ಈ ಶಾಪಗ್ರಸ್ತ ದೇಶ ಮಾತ್ರ ಬಾಬಾಸಾಹೇಬರನ್ನು ಜಾತಿಯ ಪಂಜರದಲ್ಲಿ ಬಂದಿಸಿದೆ ಎಂದರು.

ಈ ಕೂಡಲೇ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಹ್ವಾನ ಪತ್ರಿಕೆಯನ್ನು ಬದಲಾಯಿಸಬೇಕು ತಪ್ಪಿದಲ್ಲಿ ನಾಳೆಯ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago