ದೇವನಹಳ್ಳಿ: ಮೇ.6ರ ರಾತ್ರಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಹಿಟ್ ಅಂಡ್ ರನ್ ಗೆ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಗ್ರಾಮದ ವ್ಯಕ್ತಿ ಸುಧಾಕರ್(35) ಸಾವನ್ನಪ್ಪಿದ್ದ. ಈ ಹಿನ್ನೆಲೆ ಸತತವಾಗಿ ಅಪಘಾತಗಳಿಂದ ನಲುಗಿಹೋಗಿರುವ ಗ್ರಾಮಸ್ಥರಿಂದ ಇಂದು (ಮೇ.7) ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಿದರು.
ಮೃತ ಸುಧಾಕರ್ ಅತ್ತೆ, ತಾಯಿ, ಅಕ್ಕ ಇದೇ ಸ್ಥಳದಲ್ಲಿ ಅಪಘಾತದಿಂದ ಸಾವನ್ನಪ್ಪಿದ್ದರು. ಇದೀಗ ಹಿಟ್ ಅಂಡ್ ರನ್ ಗೆ ಸುಧಾಕರ್ ಕೂಡ ಮೃತನಾಗಿದ್ದಾನೆ.
ಬೆಂಗಳೂರು ಟೂ ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಡಿಕ್ಕಿ ವ್ಯಕ್ತಿಗೆ ಹೊಡೆದು ಎಸ್ಕೇಪ್ ಆಗಿದೆ. ಇದೇರೀತಿ ಮುದುಗುರ್ಕಿ ಗ್ರಾಮದ ಅನೇಕ ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಪಘಾತಗಳಿಂದ ಪಾರಾಗಲು ಅಂಡರ್ ಪಾಸ್ ನಿರ್ಮಾಣಕ್ಕೆ ಒತ್ತಾಯಿಸಿ ಗ್ರಾಮಸ್ಥರೆಲ್ಲ ಸೇರಿ ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ಮಾಡಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರವನ್ನು ಒದಗಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ರಸ್ತೆ ಮಧ್ಯದಿಂದ ಶವ ಎತ್ತಿಸಲು ಕೆಲಕಾಲ ಅಧಿಕಾರಿಗಳು ಹರಸಾಹಸಪಟ್ಟರು.
ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಬೆಂ ಗ್ರಾ ಎಎಸ್ ಪಿ 2 ಎ ವಿ ಲಕ್ಷ್ಮಿನಾರಾಯಣ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್ ಟಿ.ಆರ್, ಪೊಲೀಸ್ ಅಧಿಕಾಗಳು ಆಗಮಿಸಿ ಹೆದ್ದಾರಿಯಲ್ಲಿ ಅಪಘಾತಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು. ಅಧಿಕಾರಿಗಳ ಭರವಸೆ ಮೇರೆಗೆ ಪ್ರತಿಭಟನಾ ಸ್ಥಳದಿಂದ ಶವವನ್ನು ತೆಗೆದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…