ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತ: ಆನೇಕ ಸಾವು-ನೋವು: ಅಂಡರ್ ಪಾಸ್ ನಿರ್ಮಾಣಕ್ಕೆ ಹೆದ್ದಾರಿಯಲ್ಲಿ ಶವ ಇಟ್ಟು ಜನ ಪ್ರತಿಭಟನೆ

ದೇವನಹಳ್ಳಿ: ಮೇ.6ರ ರಾತ್ರಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಹಿಟ್ ಅಂಡ್ ರನ್ ಗೆ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಗ್ರಾಮದ ವ್ಯಕ್ತಿ ಸುಧಾಕರ್(35) ಸಾವನ್ನಪ್ಪಿದ್ದ. ಈ ಹಿನ್ನೆಲೆ ಸತತವಾಗಿ ಅಪಘಾತಗಳಿಂದ ನಲುಗಿಹೋಗಿರುವ ಗ್ರಾಮಸ್ಥರಿಂದ ಇಂದು (ಮೇ.7) ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಿದರು.

ಮೃತ ಸುಧಾಕರ್ ಅತ್ತೆ, ತಾಯಿ, ಅಕ್ಕ ಇದೇ ಸ್ಥಳದಲ್ಲಿ ಅಪಘಾತದಿಂದ ಸಾವನ್ನಪ್ಪಿದ್ದರು. ಇದೀಗ ಹಿಟ್ ಅಂಡ್ ರನ್ ಗೆ ಸುಧಾಕರ್ ಕೂಡ ಮೃತನಾಗಿದ್ದಾನೆ.

ಬೆಂಗಳೂರು ಟೂ ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಡಿಕ್ಕಿ ವ್ಯಕ್ತಿಗೆ ಹೊಡೆದು ಎಸ್ಕೇಪ್ ಆಗಿದೆ. ಇದೇರೀತಿ ಮುದುಗುರ್ಕಿ ಗ್ರಾಮದ ಅನೇಕ ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಪಘಾತಗಳಿಂದ ಪಾರಾಗಲು ಅಂಡರ್ ಪಾಸ್ ನಿರ್ಮಾಣಕ್ಕೆ ಒತ್ತಾಯಿಸಿ ಗ್ರಾಮಸ್ಥರೆಲ್ಲ ಸೇರಿ ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ಮಾಡಿದ್ದಾರೆ.

ಮೃತರ ಕುಟುಂಬಕ್ಕೆ ಪರಿಹಾರವನ್ನು ಒದಗಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ರಸ್ತೆ ಮಧ್ಯದಿಂದ ಶವ ಎತ್ತಿಸಲು ಕೆಲಕಾಲ ಅಧಿಕಾರಿಗಳು ಹರಸಾಹಸಪಟ್ಟರು.

ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಬೆಂ ಗ್ರಾ ಎಎಸ್ ಪಿ 2  ಎ ವಿ ಲಕ್ಷ್ಮಿನಾರಾಯಣ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್‌ ಟಿ.ಆರ್, ಪೊಲೀಸ್ ಅಧಿಕಾಗಳು ಆಗಮಿಸಿ ಹೆದ್ದಾರಿಯಲ್ಲಿ ಅಪಘಾತಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು. ಅಧಿಕಾರಿಗಳ ಭರವಸೆ ಮೇರೆಗೆ ಪ್ರತಿಭಟನಾ ಸ್ಥಳದಿಂದ ಶವವನ್ನು ತೆಗೆದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

22 minutes ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

11 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

20 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago