ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ 17 ಸ್ಕೈವಾಕ್ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾಪ: ಹುಲಿಕುಂಟೆ, ಮುತ್ತುಗದಹಳ್ಳಿ, ಬೋವಿಪಾಳ್ಯ, ಮಧುರನಹೊಸಹಳ್ಳಿ, ಕೆಸ್ತೂರು, ತಳವಾರ ಗೇಟ್, ಮುಶಾಶಿ ಬಳಿ ಸ್ಕೈವಾಕ್ ನಿರ್ಮಾಣಕ್ಕೆ‌ ನಿರ್ಧಾರ

ದೊಡ್ಡಬಳ್ಳಾಪುರ : ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ 17 ಸ್ಕೈವಾಕ್ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾಪವಾಗಿದೆ, ಸುಮಾರು 27 ಕೋಟಿ ವೆಚ್ಚದಲ್ಲಿ ಸ್ಕೈವಾಕ್ ಗಳು ನಿರ್ಮಾಣವಾಗುತ್ತಿದ್ದು, ಹೆದ್ದಾರಿಯಿಂದ ಪ್ರತ್ಯೇಕವಾಗಿದ್ದ ಗ್ರಾಮಗಳ ನಡುವಿನ ಸಂಪರ್ಕ ಸ್ಕೈವಾಕ್ ಗಳಿಂದ ಸಂಪರ್ಕಿಸುವಂತಾಗಿದೆ.

ಉಪನಗರ ಹೊರವರ್ತುಲ ರಸ್ತೆ (STRR) ಯೋಜನೆಯಡಿ ದಾಬಸ್ ಪೇಟೆ-ಹೊಸಕೋಟೆ ರಸ್ತೆಯನ್ನ ನಿರ್ಮಾಣ ಮಾಡಲಾಗಿದ್ದು, ಬೆಂಗಳೂರು ನಗರದಲ್ಲಿ ವಾಹನಗಳ ದಟ್ಟನೆ ಕಡಿಮೆ ಮಾಡುವುದು ಮತ್ತು ಉಪನಗರಗಳನ್ನ ಅಭಿವೃದ್ಧಿ ಮಾಡುವ ಉದ್ದೇಶಕ್ಕಾಗಿ ಹೆದ್ದಾರಿ ಅಭಿವೃದ್ಧಿ ಮಾಡಲಾಗಿದೆ, ಈ ರಸ್ತೆ ಬೆಂಗಳೂರು-ಪುಣೆ, ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು ಚೆನ್ನೈ ಹೆದ್ದಾರಿಯನ್ನ ಸಂಪರ್ಕಿಸುವ ರಸ್ತೆಯಾಗಿದೆ.

ಹೆದ್ದಾರಿ ನಿರ್ಮಾಣವಾದ ನಂತರ ರಸ್ತೆ ಬದಿಯಲ್ಲಿನ ಸಂಪರ್ಕ ಕಡಿತವಾಗಿತ್ತು, ಗ್ರಾಮಗಳ ಬಳಿ ಹೆದ್ದಾರಿ ದಾಟಲು ಜನರು ಕಷ್ಟಪಡುವಂತ ಪರಿಸ್ಥಿತಿ ಇತ್ತು, ರಸ್ತೆ ದಾಟುವ ವೇಳೆ ಅಮಾಯಕ ಜನರು ಪ್ರಾಣ ಕಳೆದು ಕೊಳ್ಳುತ್ತಿದ್ದರು, ಗ್ರಾಮಗಳ ಬಳಿ ಸ್ಕೈವಾಕ್ ನಿರ್ಮಾಣ ಮಾಡುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು. ದಾಬಸ್ -ಪೇಟೆ-ಹೊಸಕೋಟೆ ರಸ್ತೆಯಲ್ಲಿ 27 ಕೋಟಿ ವೆಚ್ಚದಲ್ಲಿ 17 ಸ್ಕೈವಾಕ್ ಗಳನ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾವನೆಯಾಗಿದೆ, ಸೋಂಪುರ ಇಡೇಸ್ಟ್ರೀಯಲ್ ಏರಿಯಾ, ಮುದ್ದಲಿಂಗನಹಳ್ಳಿ, ಹುಲಿಕುಂಟೆ, ಮುಟ್ಟುಗದಹಳ್ಳಿ, ಬೋವಿಪಾಳ್ಯ, ಮಧುರನಹೊಸಹಳ್ಳಿ, ಕೆಸ್ತೂರು,ತಳವಾರ ಗೇಟ್, ಮುಶಾಶಿ, ಬೀರಸಂದ್ರ,ಚಪ್ಪರಕಲ್ಲು, ವಿಶ್ವನಾಥಪುರ, ಬೈದ್ರಾಹಳ್ಳಿ ಗೇಟ್, ಶೆಟ್ಟಿಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ರೋಡ್, ಚನ್ನಹಳ್ಳಿ ರೋಡ್, ನಲ್ಲೂರು ರೋಡ್ ಬಳಿ ಸ್ಕೈವಾಕ್ ನಿರ್ಮಾಣಕ್ಕೆ ನಿರ್ಧಾರಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 648ರಲ್ಲಿ ನಿರ್ಮಾಣವಾಗುವ ಸ್ಕೈವಾಕ್ ವಿನ್ಯಾಸದ ಮಾದರಿ
ಸ್ಕೈವಾಕ್ ನಿರ್ಮಾಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಿದ ಕೆಸ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಮೇಶ್ ಮಾಧ್ಯಮದೊಂದಿಗೆ ಮಾತನಾಡಿದ್ದು, ಕೆಸ್ತೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆಸ್ತೂರು ಗೇಟ್, ಮೇಸ್ಟ್ರು ಮನೆ, ಕೂಗನಹಳ್ಳಿ,ಬ್ಯಾಡರಹಳ್ಳಿ ಗೇಟ್ ಬಳಿ ಸ್ಕೈವಾಕ್ ನಿರ್ಮಿಸುವಂತೆ 6 ತಿಂಗಳ ಹಿಂದೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ರು, ಆದರೆ ಹೆದ್ದಾರಿ ಪ್ರಾರಂಭವಾಗಿ ವರ್ಷವಾದರು ಸ್ಕೈವಾಕ್ ನಿರ್ಮಾಣ ಮಾಡದೆ ಜನರ ಪ್ರಾಣದೊಂದಿದೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆಂದು ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಕೆಸ್ತೂರು ಗೇಟ್ ನಲ್ಲಿ ಸ್ಕೈವಾಕ್ ಇಲ್ಲದೆ ಇರುವುದರಿಂದ ಗ್ರಾಮಸ್ಥರು ಒಂದು ಕಿ.ಮೀ ಬಳಸಿಕೊಂಡು ಅಂಡರ್ ಪಾಸ್ ಮೂಲಕ ಗ್ರಾಮಕ್ಕೆ ಬರ ಬೇಕಿದೆ, ಹಾಗೊಂದು ವೇಳೆ ಹೆದ್ದಾರಿಯನ್ನ ದಾಟಲು ಪ್ರಯತ್ನಿಸಿದ್ರೆ 150 ಕಿ.ಮೀ ವೇಗದಲ್ಲಿರುವ ವಾಹನಗಳು ಜನರ ಪ್ರಾಣವನ್ನ ಬಲಿ ಪಡೆಯುತ್ತಿವೆ, ರೈತರಿಂದ ಭೂಸ್ವಾಧೀನ ಮಾಡಿದ್ರು ಸರ್ವಿಸ್ ರಸ್ತೆ ಮಾಡಿಲ್ಲ, ಹೆದ್ದಾರಿಯನ್ನ ಸಂಪರ್ಕಿಸುವ ವೇಳೆ ಅಪಘಾತಕ್ಕೆ ತುತ್ತಾಗಿ ಗ್ರಾಮಸ್ಥರು ಪ್ರಾಣವನ್ನ ಕಳೆದುಕೊಳ್ಳುತ್ತಿದ್ದಾರೆ, ಸ್ಕೈವಾಕ್ ನಿರ್ಮಾಣಕ್ಕಾಗಿ 27 ಕೋಟಿಯ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ ಎಂಬ ಮಾಹಿತಿ ಇದೆ, ಅದಷ್ಟು ಬೇಗ ಸ್ಕೈವಾಕ್ ನಿರ್ಮಾಣ ಮಾಡದಿದ್ದಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ಈ ವೇಳೆ ನೀಡಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago