ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ 17 ಸ್ಕೈವಾಕ್ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾಪ: ಹುಲಿಕುಂಟೆ, ಮುತ್ತುಗದಹಳ್ಳಿ, ಬೋವಿಪಾಳ್ಯ, ಮಧುರನಹೊಸಹಳ್ಳಿ, ಕೆಸ್ತೂರು, ತಳವಾರ ಗೇಟ್, ಮುಶಾಶಿ ಬಳಿ ಸ್ಕೈವಾಕ್ ನಿರ್ಮಾಣಕ್ಕೆ‌ ನಿರ್ಧಾರ

ದೊಡ್ಡಬಳ್ಳಾಪುರ : ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ 17 ಸ್ಕೈವಾಕ್ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾಪವಾಗಿದೆ, ಸುಮಾರು 27 ಕೋಟಿ ವೆಚ್ಚದಲ್ಲಿ ಸ್ಕೈವಾಕ್ ಗಳು ನಿರ್ಮಾಣವಾಗುತ್ತಿದ್ದು, ಹೆದ್ದಾರಿಯಿಂದ ಪ್ರತ್ಯೇಕವಾಗಿದ್ದ ಗ್ರಾಮಗಳ ನಡುವಿನ ಸಂಪರ್ಕ ಸ್ಕೈವಾಕ್ ಗಳಿಂದ ಸಂಪರ್ಕಿಸುವಂತಾಗಿದೆ.

ಉಪನಗರ ಹೊರವರ್ತುಲ ರಸ್ತೆ (STRR) ಯೋಜನೆಯಡಿ ದಾಬಸ್ ಪೇಟೆ-ಹೊಸಕೋಟೆ ರಸ್ತೆಯನ್ನ ನಿರ್ಮಾಣ ಮಾಡಲಾಗಿದ್ದು, ಬೆಂಗಳೂರು ನಗರದಲ್ಲಿ ವಾಹನಗಳ ದಟ್ಟನೆ ಕಡಿಮೆ ಮಾಡುವುದು ಮತ್ತು ಉಪನಗರಗಳನ್ನ ಅಭಿವೃದ್ಧಿ ಮಾಡುವ ಉದ್ದೇಶಕ್ಕಾಗಿ ಹೆದ್ದಾರಿ ಅಭಿವೃದ್ಧಿ ಮಾಡಲಾಗಿದೆ, ಈ ರಸ್ತೆ ಬೆಂಗಳೂರು-ಪುಣೆ, ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು ಚೆನ್ನೈ ಹೆದ್ದಾರಿಯನ್ನ ಸಂಪರ್ಕಿಸುವ ರಸ್ತೆಯಾಗಿದೆ.

ಹೆದ್ದಾರಿ ನಿರ್ಮಾಣವಾದ ನಂತರ ರಸ್ತೆ ಬದಿಯಲ್ಲಿನ ಸಂಪರ್ಕ ಕಡಿತವಾಗಿತ್ತು, ಗ್ರಾಮಗಳ ಬಳಿ ಹೆದ್ದಾರಿ ದಾಟಲು ಜನರು ಕಷ್ಟಪಡುವಂತ ಪರಿಸ್ಥಿತಿ ಇತ್ತು, ರಸ್ತೆ ದಾಟುವ ವೇಳೆ ಅಮಾಯಕ ಜನರು ಪ್ರಾಣ ಕಳೆದು ಕೊಳ್ಳುತ್ತಿದ್ದರು, ಗ್ರಾಮಗಳ ಬಳಿ ಸ್ಕೈವಾಕ್ ನಿರ್ಮಾಣ ಮಾಡುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು. ದಾಬಸ್ -ಪೇಟೆ-ಹೊಸಕೋಟೆ ರಸ್ತೆಯಲ್ಲಿ 27 ಕೋಟಿ ವೆಚ್ಚದಲ್ಲಿ 17 ಸ್ಕೈವಾಕ್ ಗಳನ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾವನೆಯಾಗಿದೆ, ಸೋಂಪುರ ಇಡೇಸ್ಟ್ರೀಯಲ್ ಏರಿಯಾ, ಮುದ್ದಲಿಂಗನಹಳ್ಳಿ, ಹುಲಿಕುಂಟೆ, ಮುಟ್ಟುಗದಹಳ್ಳಿ, ಬೋವಿಪಾಳ್ಯ, ಮಧುರನಹೊಸಹಳ್ಳಿ, ಕೆಸ್ತೂರು,ತಳವಾರ ಗೇಟ್, ಮುಶಾಶಿ, ಬೀರಸಂದ್ರ,ಚಪ್ಪರಕಲ್ಲು, ವಿಶ್ವನಾಥಪುರ, ಬೈದ್ರಾಹಳ್ಳಿ ಗೇಟ್, ಶೆಟ್ಟಿಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ರೋಡ್, ಚನ್ನಹಳ್ಳಿ ರೋಡ್, ನಲ್ಲೂರು ರೋಡ್ ಬಳಿ ಸ್ಕೈವಾಕ್ ನಿರ್ಮಾಣಕ್ಕೆ ನಿರ್ಧಾರಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 648ರಲ್ಲಿ ನಿರ್ಮಾಣವಾಗುವ ಸ್ಕೈವಾಕ್ ವಿನ್ಯಾಸದ ಮಾದರಿ
ಸ್ಕೈವಾಕ್ ನಿರ್ಮಾಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಿದ ಕೆಸ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಮೇಶ್ ಮಾಧ್ಯಮದೊಂದಿಗೆ ಮಾತನಾಡಿದ್ದು, ಕೆಸ್ತೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆಸ್ತೂರು ಗೇಟ್, ಮೇಸ್ಟ್ರು ಮನೆ, ಕೂಗನಹಳ್ಳಿ,ಬ್ಯಾಡರಹಳ್ಳಿ ಗೇಟ್ ಬಳಿ ಸ್ಕೈವಾಕ್ ನಿರ್ಮಿಸುವಂತೆ 6 ತಿಂಗಳ ಹಿಂದೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ರು, ಆದರೆ ಹೆದ್ದಾರಿ ಪ್ರಾರಂಭವಾಗಿ ವರ್ಷವಾದರು ಸ್ಕೈವಾಕ್ ನಿರ್ಮಾಣ ಮಾಡದೆ ಜನರ ಪ್ರಾಣದೊಂದಿದೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆಂದು ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಕೆಸ್ತೂರು ಗೇಟ್ ನಲ್ಲಿ ಸ್ಕೈವಾಕ್ ಇಲ್ಲದೆ ಇರುವುದರಿಂದ ಗ್ರಾಮಸ್ಥರು ಒಂದು ಕಿ.ಮೀ ಬಳಸಿಕೊಂಡು ಅಂಡರ್ ಪಾಸ್ ಮೂಲಕ ಗ್ರಾಮಕ್ಕೆ ಬರ ಬೇಕಿದೆ, ಹಾಗೊಂದು ವೇಳೆ ಹೆದ್ದಾರಿಯನ್ನ ದಾಟಲು ಪ್ರಯತ್ನಿಸಿದ್ರೆ 150 ಕಿ.ಮೀ ವೇಗದಲ್ಲಿರುವ ವಾಹನಗಳು ಜನರ ಪ್ರಾಣವನ್ನ ಬಲಿ ಪಡೆಯುತ್ತಿವೆ, ರೈತರಿಂದ ಭೂಸ್ವಾಧೀನ ಮಾಡಿದ್ರು ಸರ್ವಿಸ್ ರಸ್ತೆ ಮಾಡಿಲ್ಲ, ಹೆದ್ದಾರಿಯನ್ನ ಸಂಪರ್ಕಿಸುವ ವೇಳೆ ಅಪಘಾತಕ್ಕೆ ತುತ್ತಾಗಿ ಗ್ರಾಮಸ್ಥರು ಪ್ರಾಣವನ್ನ ಕಳೆದುಕೊಳ್ಳುತ್ತಿದ್ದಾರೆ, ಸ್ಕೈವಾಕ್ ನಿರ್ಮಾಣಕ್ಕಾಗಿ 27 ಕೋಟಿಯ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ ಎಂಬ ಮಾಹಿತಿ ಇದೆ, ಅದಷ್ಟು ಬೇಗ ಸ್ಕೈವಾಕ್ ನಿರ್ಮಾಣ ಮಾಡದಿದ್ದಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ಈ ವೇಳೆ ನೀಡಿದರು.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

6 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

6 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

12 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

21 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

2 days ago