ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ 17 ಸ್ಕೈವಾಕ್ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾಪ: ಹುಲಿಕುಂಟೆ, ಮುತ್ತುಗದಹಳ್ಳಿ, ಬೋವಿಪಾಳ್ಯ, ಮಧುರನಹೊಸಹಳ್ಳಿ, ಕೆಸ್ತೂರು, ತಳವಾರ ಗೇಟ್, ಮುಶಾಶಿ ಬಳಿ ಸ್ಕೈವಾಕ್ ನಿರ್ಮಾಣಕ್ಕೆ‌ ನಿರ್ಧಾರ

ದೊಡ್ಡಬಳ್ಳಾಪುರ : ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ 17 ಸ್ಕೈವಾಕ್ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾಪವಾಗಿದೆ, ಸುಮಾರು 27 ಕೋಟಿ ವೆಚ್ಚದಲ್ಲಿ ಸ್ಕೈವಾಕ್ ಗಳು ನಿರ್ಮಾಣವಾಗುತ್ತಿದ್ದು, ಹೆದ್ದಾರಿಯಿಂದ ಪ್ರತ್ಯೇಕವಾಗಿದ್ದ ಗ್ರಾಮಗಳ ನಡುವಿನ ಸಂಪರ್ಕ ಸ್ಕೈವಾಕ್ ಗಳಿಂದ ಸಂಪರ್ಕಿಸುವಂತಾಗಿದೆ.

ಉಪನಗರ ಹೊರವರ್ತುಲ ರಸ್ತೆ (STRR) ಯೋಜನೆಯಡಿ ದಾಬಸ್ ಪೇಟೆ-ಹೊಸಕೋಟೆ ರಸ್ತೆಯನ್ನ ನಿರ್ಮಾಣ ಮಾಡಲಾಗಿದ್ದು, ಬೆಂಗಳೂರು ನಗರದಲ್ಲಿ ವಾಹನಗಳ ದಟ್ಟನೆ ಕಡಿಮೆ ಮಾಡುವುದು ಮತ್ತು ಉಪನಗರಗಳನ್ನ ಅಭಿವೃದ್ಧಿ ಮಾಡುವ ಉದ್ದೇಶಕ್ಕಾಗಿ ಹೆದ್ದಾರಿ ಅಭಿವೃದ್ಧಿ ಮಾಡಲಾಗಿದೆ, ಈ ರಸ್ತೆ ಬೆಂಗಳೂರು-ಪುಣೆ, ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು ಚೆನ್ನೈ ಹೆದ್ದಾರಿಯನ್ನ ಸಂಪರ್ಕಿಸುವ ರಸ್ತೆಯಾಗಿದೆ.

ಹೆದ್ದಾರಿ ನಿರ್ಮಾಣವಾದ ನಂತರ ರಸ್ತೆ ಬದಿಯಲ್ಲಿನ ಸಂಪರ್ಕ ಕಡಿತವಾಗಿತ್ತು, ಗ್ರಾಮಗಳ ಬಳಿ ಹೆದ್ದಾರಿ ದಾಟಲು ಜನರು ಕಷ್ಟಪಡುವಂತ ಪರಿಸ್ಥಿತಿ ಇತ್ತು, ರಸ್ತೆ ದಾಟುವ ವೇಳೆ ಅಮಾಯಕ ಜನರು ಪ್ರಾಣ ಕಳೆದು ಕೊಳ್ಳುತ್ತಿದ್ದರು, ಗ್ರಾಮಗಳ ಬಳಿ ಸ್ಕೈವಾಕ್ ನಿರ್ಮಾಣ ಮಾಡುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು. ದಾಬಸ್ -ಪೇಟೆ-ಹೊಸಕೋಟೆ ರಸ್ತೆಯಲ್ಲಿ 27 ಕೋಟಿ ವೆಚ್ಚದಲ್ಲಿ 17 ಸ್ಕೈವಾಕ್ ಗಳನ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾವನೆಯಾಗಿದೆ, ಸೋಂಪುರ ಇಡೇಸ್ಟ್ರೀಯಲ್ ಏರಿಯಾ, ಮುದ್ದಲಿಂಗನಹಳ್ಳಿ, ಹುಲಿಕುಂಟೆ, ಮುಟ್ಟುಗದಹಳ್ಳಿ, ಬೋವಿಪಾಳ್ಯ, ಮಧುರನಹೊಸಹಳ್ಳಿ, ಕೆಸ್ತೂರು,ತಳವಾರ ಗೇಟ್, ಮುಶಾಶಿ, ಬೀರಸಂದ್ರ,ಚಪ್ಪರಕಲ್ಲು, ವಿಶ್ವನಾಥಪುರ, ಬೈದ್ರಾಹಳ್ಳಿ ಗೇಟ್, ಶೆಟ್ಟಿಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ರೋಡ್, ಚನ್ನಹಳ್ಳಿ ರೋಡ್, ನಲ್ಲೂರು ರೋಡ್ ಬಳಿ ಸ್ಕೈವಾಕ್ ನಿರ್ಮಾಣಕ್ಕೆ ನಿರ್ಧಾರಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 648ರಲ್ಲಿ ನಿರ್ಮಾಣವಾಗುವ ಸ್ಕೈವಾಕ್ ವಿನ್ಯಾಸದ ಮಾದರಿ
ಸ್ಕೈವಾಕ್ ನಿರ್ಮಾಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಿದ ಕೆಸ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಮೇಶ್ ಮಾಧ್ಯಮದೊಂದಿಗೆ ಮಾತನಾಡಿದ್ದು, ಕೆಸ್ತೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆಸ್ತೂರು ಗೇಟ್, ಮೇಸ್ಟ್ರು ಮನೆ, ಕೂಗನಹಳ್ಳಿ,ಬ್ಯಾಡರಹಳ್ಳಿ ಗೇಟ್ ಬಳಿ ಸ್ಕೈವಾಕ್ ನಿರ್ಮಿಸುವಂತೆ 6 ತಿಂಗಳ ಹಿಂದೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ರು, ಆದರೆ ಹೆದ್ದಾರಿ ಪ್ರಾರಂಭವಾಗಿ ವರ್ಷವಾದರು ಸ್ಕೈವಾಕ್ ನಿರ್ಮಾಣ ಮಾಡದೆ ಜನರ ಪ್ರಾಣದೊಂದಿದೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆಂದು ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಕೆಸ್ತೂರು ಗೇಟ್ ನಲ್ಲಿ ಸ್ಕೈವಾಕ್ ಇಲ್ಲದೆ ಇರುವುದರಿಂದ ಗ್ರಾಮಸ್ಥರು ಒಂದು ಕಿ.ಮೀ ಬಳಸಿಕೊಂಡು ಅಂಡರ್ ಪಾಸ್ ಮೂಲಕ ಗ್ರಾಮಕ್ಕೆ ಬರ ಬೇಕಿದೆ, ಹಾಗೊಂದು ವೇಳೆ ಹೆದ್ದಾರಿಯನ್ನ ದಾಟಲು ಪ್ರಯತ್ನಿಸಿದ್ರೆ 150 ಕಿ.ಮೀ ವೇಗದಲ್ಲಿರುವ ವಾಹನಗಳು ಜನರ ಪ್ರಾಣವನ್ನ ಬಲಿ ಪಡೆಯುತ್ತಿವೆ, ರೈತರಿಂದ ಭೂಸ್ವಾಧೀನ ಮಾಡಿದ್ರು ಸರ್ವಿಸ್ ರಸ್ತೆ ಮಾಡಿಲ್ಲ, ಹೆದ್ದಾರಿಯನ್ನ ಸಂಪರ್ಕಿಸುವ ವೇಳೆ ಅಪಘಾತಕ್ಕೆ ತುತ್ತಾಗಿ ಗ್ರಾಮಸ್ಥರು ಪ್ರಾಣವನ್ನ ಕಳೆದುಕೊಳ್ಳುತ್ತಿದ್ದಾರೆ, ಸ್ಕೈವಾಕ್ ನಿರ್ಮಾಣಕ್ಕಾಗಿ 27 ಕೋಟಿಯ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ ಎಂಬ ಮಾಹಿತಿ ಇದೆ, ಅದಷ್ಟು ಬೇಗ ಸ್ಕೈವಾಕ್ ನಿರ್ಮಾಣ ಮಾಡದಿದ್ದಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ಈ ವೇಳೆ ನೀಡಿದರು.

Ramesh Babu

Journalist

Recent Posts

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

9 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

9 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

9 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

14 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

20 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

21 hours ago