ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರು ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ- ಎಸ್ಪಿ ಸಿ.ಕೆ.ಬಾಬಾ

ದೊಡ್ಡಬಳ್ಳಾಪುರ : ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ದೇಶದ ಉಳಿವಿಗಾಗಿ ನೀವು ಪಡೆದ ತರಬೇತಿ ಸಹಕಾರಿಯಾಗಲಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನಿಮ್ಮೆಲ್ಲರ ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊರವಲಯದ ಅನಿಬಿಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಯುವ ಅಪಾಯ ಮಿತ್ರ ಯೋಜನೆ ಅಡಿಯಲ್ಲಿ ಆಯೋಜನೆ ಮಾಡಲಾಗಿದ್ದ ಯುವ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ವಿವಿಧ ನೈಸರ್ಗಿಕ ವಿಕೋಪಗಳಿಂದ ಭಾರತವು ಹಾನಿಗೊಳಗಾದ ಸಮಯದಲ್ಲಿ ವಿಪತ್ತು ನಿರ್ವಹಣಾ ತಂಡವು ತಕ್ಷಣ ನೆರವಿಗೆ ಬರುತ್ತದೆ. 7 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಪ್ರತಿನಿತ್ಯ ಸಹಕಾರಿಯಾಗುವ ವಿಪತ್ತು ನಿರ್ವಹಣೆಯಿಂದ ಭೂಕಂಪ, ಅಗ್ನಿ ಅನಾಹುತ, ಪ್ರವಾಹಗಳಲ್ಲಿ ಜನರನ್ನು ರಕ್ಷಣೆ ಮಾಡುವ ವಿಧಾನ ತಿಳಿಸಲಾಗುತ್ತದೆ. ಅಲ್ಲದೇ ಮಕ್ಕಳಲ್ಲಿ ದೇಶಭಿಮಾನ, ರಾಷ್ಟ್ರೀಯತೆ ಜೊತೆಗೆ ರಾಷ್ಟ್ರ ನಿರ್ಮಾಣದ ಪರಿಕಲ್ಪನೆ ಬೆಳೆಸುವುದು ವಿಶೇಷ. ನಾವು ಸದಾ ಕೆಲಸಗಳ ಒತ್ತಡದಲ್ಲಿರುತ್ತೇವೆ ಆದರೆ ಇಂತಹ ಕಾರ್ಯಕ್ರಮಗಳಲ್ಲಿ ಬಂದು ಭಾಗವಹಿಸಿದರೆ ನಮ್ಮ ಮೈಂಡ್ ರೀಫ್ರೆಶ್ ಆಗುತ್ತೆ ಎಂದರು.

ಇಂತಹ ತರಬೇತಿ ಶಿಬಿರದಲ್ಲಿ ಭಾಗವಹಿಸುವುದರಿಂದ ಶಿಸ್ತು, ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಈ ತರಬೇತಿಯಲ್ಲಿ ಬಹುದೂರದಿಂದ ಬಂದಿರುವ    ನೂರಾರು ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ವಿಶೇಷವಾಗಿದ್ದು. ಇಂದು ನಾನು ಅತ್ಯುತ್ತಮ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂಬ ಭಾವನೆ ನನ್ನಲ್ಲಿ ಮೂಡಿದೆ. ನನ್ನ  ವಿದ್ಯಾಭ್ಯಾಸದ ದಿನಗಳಲ್ಲಿ ಎಸಿಸಿ ಹಾಗೂ ಎನ್ ಎಸ್ ಎಸ್ ನಲ್ಲಿ ತರಬೇತಿ ಪಡೆದಿದ್ದೇನೆ. ಉತ್ತಮ ಜೀವನಶೈಲಿಗೆ ಇಂತಹ ತರಬೇತಿಗಳು ಅವಶ್ಯಕ  ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಮಾತನಾಡಿ, ಸ್ಥಳೀಯವಾಗಿ ಯಾವುದೇ ನೈಸರ್ಗಿಕ ವಿಪತ್ತುಗಳ ಸಮಸ್ಯೆ ಇಲ್ಲದೆ  ನಾವು ನೀವು ಸುರಕ್ಷಿತವಾಗಿ ಇದ್ದೇವೆ  ಆದರೆ ಜಮ್ಮು ಕಾಶ್ಮೀರ, ಉತ್ತಾರಾಂಚಲ್ ಹೆಚ್ಚು ವಿಪತ್ತು ಸಂಭವಿಸುತ್ತದೆ.ನಮ್ಮ ರಾಜ್ಯದ ಕೋಸ್ಟಲ್ ಏರಿಯಾಗಳಲ್ಲಿ ಆಪತ್ತು ಸಂಭಾವಿಸುವ ಪ್ರಮಾಣ ಹೆಚ್ಚಾಗಿದ್ದು ವಿಪತ್ತು ನಿರ್ವಹಣಾ ತಂಡಗಳ  ಸಹಾಯದ ಅವಶ್ಯಕತೆ  ಹೆಚ್ಚಿರುತ್ತದೆ. ಇಂತಹ ತರಬೇತಿಗಳಲ್ಲಿ ಕೃಷಿ ಹೊಂಡಾ ಗಳ ಬಗ್ಗೆ ಅರಿವು ಮೂಡಿಸುವುದು  ಅಗತ್ಯವಾಗಿದ್ದು ನಗರ ಪ್ರದೇಶಗಳಲ್ಲಿ ಕೈಗಾರಿಕಾ ಆಪತ್ತುಗಳಿಂದ ನಾವು ಬಳಲಿದ್ದೇವೆ. ಇಂತಹ ಸಮಸ್ಯೆಗಳಿಂದ ಪಾರಾಗಲು ನಿಯತಕಲಿಕಾವಾಗಿ ಮಾಕ್ ಡ್ರಿಲ್  ಮಾಡಿಸುವ ಮೂಲಕ ಜನರನ್ನು ಜಾಗೃತಿ ಮೂಡಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದರು.

ಕರ್ನಾಟಕ ರಾಜ್ಯ ಸ್ಕೌಟ್ಸ್ ಅಂಡ್ ಗೈಡ್ಸ್ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಮಾತನಾಡಿ, 7 ದಿನಗಳ ಕಾಲದ ತರಬೇತಿಯಲ್ಲಿ ಸುಮಾರು 400ಕ್ಕೂ ಅಧಿಕ  ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯ, ನೈಸರ್ಗಿಕ ವಿಪತ್ತು ನಿರ್ವಹಣೆ ಸಂದರ್ಭಗಳಲ್ಲಿ ಯುವ ಸಮುದಾಯದ ಪಾತ್ರ ಮುಖ್ಯವಾದದ್ದು, ಪ್ರತಿನಿತ್ಯ ಅವಶ್ಯಕವಿರುವ ತರಬೇತಿಯನ್ನು ಈ ಶಿಬಿರ ನೀಡಲಿದೆ. ಈ ತರಬೇತಿ ಪಡೆದ ಪ್ರತಿ ಮಗುವಿಗೂ ಜೀವ ವಿಮೆ ಹಾಗೂ ಉಪಯುಕ್ತ ವಿಪತ್ತು ನಿರ್ವಹಣಾ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಸ್ಕೌಟ್ಸ್ ಅಂಡ್ ಗೈಡ್ಸ್ ನ  ಪ್ರಮುಖರು ಹಾಜರಿದ್ದರು.

Ramesh Babu

Journalist

Recent Posts

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

38 minutes ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

3 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

6 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

8 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

20 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

23 hours ago