ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರು ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ- ಎಸ್ಪಿ ಸಿ.ಕೆ.ಬಾಬಾ

ದೊಡ್ಡಬಳ್ಳಾಪುರ : ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ದೇಶದ ಉಳಿವಿಗಾಗಿ ನೀವು ಪಡೆದ ತರಬೇತಿ ಸಹಕಾರಿಯಾಗಲಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನಿಮ್ಮೆಲ್ಲರ ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊರವಲಯದ ಅನಿಬಿಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಯುವ ಅಪಾಯ ಮಿತ್ರ ಯೋಜನೆ ಅಡಿಯಲ್ಲಿ ಆಯೋಜನೆ ಮಾಡಲಾಗಿದ್ದ ಯುವ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ವಿವಿಧ ನೈಸರ್ಗಿಕ ವಿಕೋಪಗಳಿಂದ ಭಾರತವು ಹಾನಿಗೊಳಗಾದ ಸಮಯದಲ್ಲಿ ವಿಪತ್ತು ನಿರ್ವಹಣಾ ತಂಡವು ತಕ್ಷಣ ನೆರವಿಗೆ ಬರುತ್ತದೆ. 7 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಪ್ರತಿನಿತ್ಯ ಸಹಕಾರಿಯಾಗುವ ವಿಪತ್ತು ನಿರ್ವಹಣೆಯಿಂದ ಭೂಕಂಪ, ಅಗ್ನಿ ಅನಾಹುತ, ಪ್ರವಾಹಗಳಲ್ಲಿ ಜನರನ್ನು ರಕ್ಷಣೆ ಮಾಡುವ ವಿಧಾನ ತಿಳಿಸಲಾಗುತ್ತದೆ. ಅಲ್ಲದೇ ಮಕ್ಕಳಲ್ಲಿ ದೇಶಭಿಮಾನ, ರಾಷ್ಟ್ರೀಯತೆ ಜೊತೆಗೆ ರಾಷ್ಟ್ರ ನಿರ್ಮಾಣದ ಪರಿಕಲ್ಪನೆ ಬೆಳೆಸುವುದು ವಿಶೇಷ. ನಾವು ಸದಾ ಕೆಲಸಗಳ ಒತ್ತಡದಲ್ಲಿರುತ್ತೇವೆ ಆದರೆ ಇಂತಹ ಕಾರ್ಯಕ್ರಮಗಳಲ್ಲಿ ಬಂದು ಭಾಗವಹಿಸಿದರೆ ನಮ್ಮ ಮೈಂಡ್ ರೀಫ್ರೆಶ್ ಆಗುತ್ತೆ ಎಂದರು.

ಇಂತಹ ತರಬೇತಿ ಶಿಬಿರದಲ್ಲಿ ಭಾಗವಹಿಸುವುದರಿಂದ ಶಿಸ್ತು, ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಈ ತರಬೇತಿಯಲ್ಲಿ ಬಹುದೂರದಿಂದ ಬಂದಿರುವ    ನೂರಾರು ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ವಿಶೇಷವಾಗಿದ್ದು. ಇಂದು ನಾನು ಅತ್ಯುತ್ತಮ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂಬ ಭಾವನೆ ನನ್ನಲ್ಲಿ ಮೂಡಿದೆ. ನನ್ನ  ವಿದ್ಯಾಭ್ಯಾಸದ ದಿನಗಳಲ್ಲಿ ಎಸಿಸಿ ಹಾಗೂ ಎನ್ ಎಸ್ ಎಸ್ ನಲ್ಲಿ ತರಬೇತಿ ಪಡೆದಿದ್ದೇನೆ. ಉತ್ತಮ ಜೀವನಶೈಲಿಗೆ ಇಂತಹ ತರಬೇತಿಗಳು ಅವಶ್ಯಕ  ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಮಾತನಾಡಿ, ಸ್ಥಳೀಯವಾಗಿ ಯಾವುದೇ ನೈಸರ್ಗಿಕ ವಿಪತ್ತುಗಳ ಸಮಸ್ಯೆ ಇಲ್ಲದೆ  ನಾವು ನೀವು ಸುರಕ್ಷಿತವಾಗಿ ಇದ್ದೇವೆ  ಆದರೆ ಜಮ್ಮು ಕಾಶ್ಮೀರ, ಉತ್ತಾರಾಂಚಲ್ ಹೆಚ್ಚು ವಿಪತ್ತು ಸಂಭವಿಸುತ್ತದೆ.ನಮ್ಮ ರಾಜ್ಯದ ಕೋಸ್ಟಲ್ ಏರಿಯಾಗಳಲ್ಲಿ ಆಪತ್ತು ಸಂಭಾವಿಸುವ ಪ್ರಮಾಣ ಹೆಚ್ಚಾಗಿದ್ದು ವಿಪತ್ತು ನಿರ್ವಹಣಾ ತಂಡಗಳ  ಸಹಾಯದ ಅವಶ್ಯಕತೆ  ಹೆಚ್ಚಿರುತ್ತದೆ. ಇಂತಹ ತರಬೇತಿಗಳಲ್ಲಿ ಕೃಷಿ ಹೊಂಡಾ ಗಳ ಬಗ್ಗೆ ಅರಿವು ಮೂಡಿಸುವುದು  ಅಗತ್ಯವಾಗಿದ್ದು ನಗರ ಪ್ರದೇಶಗಳಲ್ಲಿ ಕೈಗಾರಿಕಾ ಆಪತ್ತುಗಳಿಂದ ನಾವು ಬಳಲಿದ್ದೇವೆ. ಇಂತಹ ಸಮಸ್ಯೆಗಳಿಂದ ಪಾರಾಗಲು ನಿಯತಕಲಿಕಾವಾಗಿ ಮಾಕ್ ಡ್ರಿಲ್  ಮಾಡಿಸುವ ಮೂಲಕ ಜನರನ್ನು ಜಾಗೃತಿ ಮೂಡಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದರು.

ಕರ್ನಾಟಕ ರಾಜ್ಯ ಸ್ಕೌಟ್ಸ್ ಅಂಡ್ ಗೈಡ್ಸ್ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಮಾತನಾಡಿ, 7 ದಿನಗಳ ಕಾಲದ ತರಬೇತಿಯಲ್ಲಿ ಸುಮಾರು 400ಕ್ಕೂ ಅಧಿಕ  ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯ, ನೈಸರ್ಗಿಕ ವಿಪತ್ತು ನಿರ್ವಹಣೆ ಸಂದರ್ಭಗಳಲ್ಲಿ ಯುವ ಸಮುದಾಯದ ಪಾತ್ರ ಮುಖ್ಯವಾದದ್ದು, ಪ್ರತಿನಿತ್ಯ ಅವಶ್ಯಕವಿರುವ ತರಬೇತಿಯನ್ನು ಈ ಶಿಬಿರ ನೀಡಲಿದೆ. ಈ ತರಬೇತಿ ಪಡೆದ ಪ್ರತಿ ಮಗುವಿಗೂ ಜೀವ ವಿಮೆ ಹಾಗೂ ಉಪಯುಕ್ತ ವಿಪತ್ತು ನಿರ್ವಹಣಾ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಸ್ಕೌಟ್ಸ್ ಅಂಡ್ ಗೈಡ್ಸ್ ನ  ಪ್ರಮುಖರು ಹಾಜರಿದ್ದರು.

Ramesh Babu

Journalist

Recent Posts

ಸಂಬಂಧಗಳ ಬಲೆಯೊಳಗೆ….

ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…

2 hours ago

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

23 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

3 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

3 days ago