ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟ: ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ: 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ: ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಲಾಗಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ ಹೊರಡಿಸಿದ್ದಾರೆ.

ಏರ್​ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಜಿಲ್ಲೆಗಳಲ್ಲಿ ನಿಗಾವಹಿಸುವಂತೆ ಎಸ್​ಪಿಗಳಿಗೆ ಡಿಜಿ&ಐಜಿಪಿ ಆದೇಶಿಸಿದ್ದಾರೆ.

ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟಕಕ್ಕೆ ಕಾರಣ ಏನೆಂದು ಪತ್ತೆಯಾಗಿಲ್ಲ. ಸದ್ಯ 7 ಅಗ್ನಿಶಾಮಕ ವಾಹನ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ನೆರೆದಿತ್ತು.

ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

6 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago