ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟ: ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ: 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ: ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಲಾಗಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ ಹೊರಡಿಸಿದ್ದಾರೆ.

ಏರ್​ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಜಿಲ್ಲೆಗಳಲ್ಲಿ ನಿಗಾವಹಿಸುವಂತೆ ಎಸ್​ಪಿಗಳಿಗೆ ಡಿಜಿ&ಐಜಿಪಿ ಆದೇಶಿಸಿದ್ದಾರೆ.

ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟಕಕ್ಕೆ ಕಾರಣ ಏನೆಂದು ಪತ್ತೆಯಾಗಿಲ್ಲ. ಸದ್ಯ 7 ಅಗ್ನಿಶಾಮಕ ವಾಹನ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ನೆರೆದಿತ್ತು.

ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ.

Ramesh Babu

Journalist

Recent Posts

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

5 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

6 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

10 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

13 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago