ನೆಲಮಂಗಲ : ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಸ್ಫೋಟದಲ್ಲಿ ಗಾಯಗೊಂಡ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಅರ್ಗ್ಯಾನಿಕ್ ಅರೋಮ್ಯಾಟಿಕ್ಸ್. ಪ್ರೈ.ಲಿ ಕಂಪನಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕ ಚಿಗಮಲ್ಲಪ್ಪ ಅಲಿಯಾಸ್ ಮಂಜಪ್ಪ(40) ಸ್ಥಳದಲ್ಲೇ ಮೃತನಾಗಿದ್ದಾನೆ.
ಚಿಗಮಲ್ಲಪ್ಪ ಮೂಲತಃ ವಿಜಯ ನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕುಂಚೂರು ಗ್ರಾಮದವನಾಗಿದ್ದು, ಟಿ.ದಾಸರಹಳ್ಳಿಯಲ್ಲಿ ವಾಸವಿದ್ದ ಎನ್ನಲಾಗಿದೆ.
ಮತ್ತೋರ್ವ ಕಾರ್ಮಿಕ ಮನೋಜ್(29) ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ, ಮನೋಜ್ ತುಮಕೂರು ಜಿಲ್ಲೆಯ ಬೆಳ್ಳಾವಿ ಸಮೀಪದ ಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ.
ಘಟನೆ ಹಿನ್ನಲೆ: ರಾಸಾಯನಿಕ ಬಳಕೆ ಮಾಡುವ ಕಂಪನಿಯಲ್ಲಿ, ಮುಂಜಾಗ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸದ ಕಾರಣದಿಂದಾಗಿ ತೀವ್ರವಾದ ಸ್ಫೋಟ ಉಂಟಾಗಿದೆ.
ಬಾಯ್ಲರ್ ಮಿಷಿನ್ ಗಳು ತುಕ್ಕು ಹಿಡಿದಿದ್ದು, ಸ್ಪೋಟದ ರಭಸ ತೀವ್ರವಾಗಿದ್ದುದರಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಬಾಯ್ಲರ್ ರೀಪೇರಿ ಇದ್ದ ಹಿನ್ನೆಲೆಯಲ್ಲಿ ಬಾಯ್ಲರ್ ಅನ್ನು ಕಂಪನಿಯ ಒಳಗಿನಿಂದ ಹೊರಗಡೆ ತಂದಾಗ, ಸಿಡಿತ ಉಂಟಾಗಿದೆ, ಸ್ಫೋಟದ ರಭಸಕ್ಕೆ, ಬಾಯ್ಲರ್ ನ ಕಬ್ಬಿಣದ ತುಂಡುಗಳು, ಬೋಲ್ಟ್ ಗಳು ಬಹು ದೂರದವರೆಗೆ ಹಾರಿ ಬಿದ್ದಿದೆ.
ಒಂದು ವರ್ಷದ ಹಿಂದೆಯೂ ಸಹ, ಇದೇ ಕಂಪನಿಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಪದೇ ಪದೇ ಸಾವಿನ ಘಟನೆಗಳು ಮರುಕಳಿಸುತ್ತಿರುವುದು, ಸುರಕ್ಷತಾ ಕ್ರಮದ ವೈಫಲ್ಯವನ್ನು ಎದ್ದು ತೋರಿಸುವಂತಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಜಗದೀಶ್, ಆರಕ್ಷಕ ನಿರೀಕ್ಷಕ ರವಿ.ಎಸ್. ಪಿಎಸ್ಐ ವಿಜಯಕುಮಾರಿ, ಎಎಸ್ಐ ವೀರಭದ್ರಯ್ಯ, ಮಲ್ಲೇಶ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…