ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ: ಕಾರ್ಮಿಕನೋರ್ವ ಸಾವು: ಮತ್ತೋರ್ವನ ಸ್ಥಿತಿ ಚಿಂತಾಜನಕ

ನೆಲಮಂಗಲ : ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಸ್ಫೋಟದಲ್ಲಿ ಗಾಯಗೊಂಡ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಅರ್ಗ್ಯಾನಿಕ್ ಅರೋಮ್ಯಾಟಿಕ್ಸ್. ಪ್ರೈ.ಲಿ ಕಂಪನಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕ ಚಿಗಮಲ್ಲಪ್ಪ ಅಲಿಯಾಸ್ ಮಂಜಪ್ಪ(40) ಸ್ಥಳದಲ್ಲೇ ಮೃತನಾಗಿದ್ದಾನೆ.

ಚಿಗಮಲ್ಲಪ್ಪ ಮೂಲತಃ ವಿಜಯ ನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕುಂಚೂರು ಗ್ರಾಮದವನಾಗಿದ್ದು, ಟಿ.ದಾಸರಹಳ್ಳಿಯಲ್ಲಿ ವಾಸವಿದ್ದ ಎನ್ನಲಾಗಿದೆ.

ಮತ್ತೋರ್ವ ಕಾರ್ಮಿಕ ಮನೋಜ್(29) ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ, ಮನೋಜ್ ತುಮಕೂರು ಜಿಲ್ಲೆಯ ಬೆಳ್ಳಾವಿ ಸಮೀಪದ ಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ.

ಘಟನೆ ಹಿನ್ನಲೆ: ರಾಸಾಯನಿಕ ಬಳಕೆ ಮಾಡುವ ಕಂಪನಿಯಲ್ಲಿ, ಮುಂಜಾಗ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸದ ಕಾರಣದಿಂದಾಗಿ  ತೀವ್ರವಾದ ಸ್ಫೋಟ ಉಂಟಾಗಿದೆ.

ಬಾಯ್ಲರ್ ಮಿಷಿನ್ ಗಳು ತುಕ್ಕು ಹಿಡಿದಿದ್ದು, ಸ್ಪೋಟದ ರಭಸ ತೀವ್ರವಾಗಿದ್ದುದರಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬಾಯ್ಲರ್ ರೀಪೇರಿ ಇದ್ದ ಹಿನ್ನೆಲೆಯಲ್ಲಿ ಬಾಯ್ಲರ್ ಅನ್ನು ಕಂಪನಿಯ ಒಳಗಿನಿಂದ ಹೊರಗಡೆ ತಂದಾಗ, ಸಿಡಿತ ಉಂಟಾಗಿದೆ, ಸ್ಫೋಟದ ರಭಸಕ್ಕೆ, ಬಾಯ್ಲರ್ ನ ಕಬ್ಬಿಣದ ತುಂಡುಗಳು, ಬೋಲ್ಟ್ ಗಳು ಬಹು ದೂರದವರೆಗೆ ಹಾರಿ ಬಿದ್ದಿದೆ.

ಒಂದು ವರ್ಷದ ಹಿಂದೆಯೂ ಸಹ, ಇದೇ ಕಂಪನಿಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಪದೇ ಪದೇ ಸಾವಿನ ಘಟನೆಗಳು ಮರುಕಳಿಸುತ್ತಿರುವುದು, ಸುರಕ್ಷತಾ ಕ್ರಮದ ವೈಫಲ್ಯವನ್ನು ಎದ್ದು ತೋರಿಸುವಂತಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಜಗದೀಶ್, ಆರಕ್ಷಕ ನಿರೀಕ್ಷಕ ರವಿ.ಎಸ್. ಪಿಎಸ್ಐ ವಿಜಯಕುಮಾರಿ, ಎಎಸ್ಐ ವೀರಭದ್ರಯ್ಯ, ಮಲ್ಲೇಶ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

8 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

17 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

21 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago