ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ: ಕಾರ್ಮಿಕನೋರ್ವ ಸಾವು: ಮತ್ತೋರ್ವನ ಸ್ಥಿತಿ ಚಿಂತಾಜನಕ

ನೆಲಮಂಗಲ : ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಸ್ಫೋಟದಲ್ಲಿ ಗಾಯಗೊಂಡ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಅರ್ಗ್ಯಾನಿಕ್ ಅರೋಮ್ಯಾಟಿಕ್ಸ್. ಪ್ರೈ.ಲಿ ಕಂಪನಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕ ಚಿಗಮಲ್ಲಪ್ಪ ಅಲಿಯಾಸ್ ಮಂಜಪ್ಪ(40) ಸ್ಥಳದಲ್ಲೇ ಮೃತನಾಗಿದ್ದಾನೆ.

ಚಿಗಮಲ್ಲಪ್ಪ ಮೂಲತಃ ವಿಜಯ ನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕುಂಚೂರು ಗ್ರಾಮದವನಾಗಿದ್ದು, ಟಿ.ದಾಸರಹಳ್ಳಿಯಲ್ಲಿ ವಾಸವಿದ್ದ ಎನ್ನಲಾಗಿದೆ.

ಮತ್ತೋರ್ವ ಕಾರ್ಮಿಕ ಮನೋಜ್(29) ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ, ಮನೋಜ್ ತುಮಕೂರು ಜಿಲ್ಲೆಯ ಬೆಳ್ಳಾವಿ ಸಮೀಪದ ಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ.

ಘಟನೆ ಹಿನ್ನಲೆ: ರಾಸಾಯನಿಕ ಬಳಕೆ ಮಾಡುವ ಕಂಪನಿಯಲ್ಲಿ, ಮುಂಜಾಗ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸದ ಕಾರಣದಿಂದಾಗಿ  ತೀವ್ರವಾದ ಸ್ಫೋಟ ಉಂಟಾಗಿದೆ.

ಬಾಯ್ಲರ್ ಮಿಷಿನ್ ಗಳು ತುಕ್ಕು ಹಿಡಿದಿದ್ದು, ಸ್ಪೋಟದ ರಭಸ ತೀವ್ರವಾಗಿದ್ದುದರಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬಾಯ್ಲರ್ ರೀಪೇರಿ ಇದ್ದ ಹಿನ್ನೆಲೆಯಲ್ಲಿ ಬಾಯ್ಲರ್ ಅನ್ನು ಕಂಪನಿಯ ಒಳಗಿನಿಂದ ಹೊರಗಡೆ ತಂದಾಗ, ಸಿಡಿತ ಉಂಟಾಗಿದೆ, ಸ್ಫೋಟದ ರಭಸಕ್ಕೆ, ಬಾಯ್ಲರ್ ನ ಕಬ್ಬಿಣದ ತುಂಡುಗಳು, ಬೋಲ್ಟ್ ಗಳು ಬಹು ದೂರದವರೆಗೆ ಹಾರಿ ಬಿದ್ದಿದೆ.

ಒಂದು ವರ್ಷದ ಹಿಂದೆಯೂ ಸಹ, ಇದೇ ಕಂಪನಿಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಪದೇ ಪದೇ ಸಾವಿನ ಘಟನೆಗಳು ಮರುಕಳಿಸುತ್ತಿರುವುದು, ಸುರಕ್ಷತಾ ಕ್ರಮದ ವೈಫಲ್ಯವನ್ನು ಎದ್ದು ತೋರಿಸುವಂತಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಜಗದೀಶ್, ಆರಕ್ಷಕ ನಿರೀಕ್ಷಕ ರವಿ.ಎಸ್. ಪಿಎಸ್ಐ ವಿಜಯಕುಮಾರಿ, ಎಎಸ್ಐ ವೀರಭದ್ರಯ್ಯ, ಮಲ್ಲೇಶ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

17 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

22 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago