ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ: ಕಾರ್ಮಿಕನೋರ್ವ ಸಾವು: ಮತ್ತೋರ್ವನ ಸ್ಥಿತಿ ಚಿಂತಾಜನಕ

ನೆಲಮಂಗಲ : ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಸ್ಫೋಟದಲ್ಲಿ ಗಾಯಗೊಂಡ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಅರ್ಗ್ಯಾನಿಕ್ ಅರೋಮ್ಯಾಟಿಕ್ಸ್. ಪ್ರೈ.ಲಿ ಕಂಪನಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕ ಚಿಗಮಲ್ಲಪ್ಪ ಅಲಿಯಾಸ್ ಮಂಜಪ್ಪ(40) ಸ್ಥಳದಲ್ಲೇ ಮೃತನಾಗಿದ್ದಾನೆ.

ಚಿಗಮಲ್ಲಪ್ಪ ಮೂಲತಃ ವಿಜಯ ನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕುಂಚೂರು ಗ್ರಾಮದವನಾಗಿದ್ದು, ಟಿ.ದಾಸರಹಳ್ಳಿಯಲ್ಲಿ ವಾಸವಿದ್ದ ಎನ್ನಲಾಗಿದೆ.

ಮತ್ತೋರ್ವ ಕಾರ್ಮಿಕ ಮನೋಜ್(29) ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ, ಮನೋಜ್ ತುಮಕೂರು ಜಿಲ್ಲೆಯ ಬೆಳ್ಳಾವಿ ಸಮೀಪದ ಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ.

ಘಟನೆ ಹಿನ್ನಲೆ: ರಾಸಾಯನಿಕ ಬಳಕೆ ಮಾಡುವ ಕಂಪನಿಯಲ್ಲಿ, ಮುಂಜಾಗ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸದ ಕಾರಣದಿಂದಾಗಿ  ತೀವ್ರವಾದ ಸ್ಫೋಟ ಉಂಟಾಗಿದೆ.

ಬಾಯ್ಲರ್ ಮಿಷಿನ್ ಗಳು ತುಕ್ಕು ಹಿಡಿದಿದ್ದು, ಸ್ಪೋಟದ ರಭಸ ತೀವ್ರವಾಗಿದ್ದುದರಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬಾಯ್ಲರ್ ರೀಪೇರಿ ಇದ್ದ ಹಿನ್ನೆಲೆಯಲ್ಲಿ ಬಾಯ್ಲರ್ ಅನ್ನು ಕಂಪನಿಯ ಒಳಗಿನಿಂದ ಹೊರಗಡೆ ತಂದಾಗ, ಸಿಡಿತ ಉಂಟಾಗಿದೆ, ಸ್ಫೋಟದ ರಭಸಕ್ಕೆ, ಬಾಯ್ಲರ್ ನ ಕಬ್ಬಿಣದ ತುಂಡುಗಳು, ಬೋಲ್ಟ್ ಗಳು ಬಹು ದೂರದವರೆಗೆ ಹಾರಿ ಬಿದ್ದಿದೆ.

ಒಂದು ವರ್ಷದ ಹಿಂದೆಯೂ ಸಹ, ಇದೇ ಕಂಪನಿಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಪದೇ ಪದೇ ಸಾವಿನ ಘಟನೆಗಳು ಮರುಕಳಿಸುತ್ತಿರುವುದು, ಸುರಕ್ಷತಾ ಕ್ರಮದ ವೈಫಲ್ಯವನ್ನು ಎದ್ದು ತೋರಿಸುವಂತಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಜಗದೀಶ್, ಆರಕ್ಷಕ ನಿರೀಕ್ಷಕ ರವಿ.ಎಸ್. ಪಿಎಸ್ಐ ವಿಜಯಕುಮಾರಿ, ಎಎಸ್ಐ ವೀರಭದ್ರಯ್ಯ, ಮಲ್ಲೇಶ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

8 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

11 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

15 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago