ನೆಲಮಂಗಲ : ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಸ್ಫೋಟದಲ್ಲಿ ಗಾಯಗೊಂಡ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಅರ್ಗ್ಯಾನಿಕ್ ಅರೋಮ್ಯಾಟಿಕ್ಸ್. ಪ್ರೈ.ಲಿ ಕಂಪನಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕ ಚಿಗಮಲ್ಲಪ್ಪ ಅಲಿಯಾಸ್ ಮಂಜಪ್ಪ(40) ಸ್ಥಳದಲ್ಲೇ ಮೃತನಾಗಿದ್ದಾನೆ.
ಚಿಗಮಲ್ಲಪ್ಪ ಮೂಲತಃ ವಿಜಯ ನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕುಂಚೂರು ಗ್ರಾಮದವನಾಗಿದ್ದು, ಟಿ.ದಾಸರಹಳ್ಳಿಯಲ್ಲಿ ವಾಸವಿದ್ದ ಎನ್ನಲಾಗಿದೆ.
ಮತ್ತೋರ್ವ ಕಾರ್ಮಿಕ ಮನೋಜ್(29) ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ, ಮನೋಜ್ ತುಮಕೂರು ಜಿಲ್ಲೆಯ ಬೆಳ್ಳಾವಿ ಸಮೀಪದ ಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ.
ಘಟನೆ ಹಿನ್ನಲೆ: ರಾಸಾಯನಿಕ ಬಳಕೆ ಮಾಡುವ ಕಂಪನಿಯಲ್ಲಿ, ಮುಂಜಾಗ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸದ ಕಾರಣದಿಂದಾಗಿ ತೀವ್ರವಾದ ಸ್ಫೋಟ ಉಂಟಾಗಿದೆ.
ಬಾಯ್ಲರ್ ಮಿಷಿನ್ ಗಳು ತುಕ್ಕು ಹಿಡಿದಿದ್ದು, ಸ್ಪೋಟದ ರಭಸ ತೀವ್ರವಾಗಿದ್ದುದರಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಬಾಯ್ಲರ್ ರೀಪೇರಿ ಇದ್ದ ಹಿನ್ನೆಲೆಯಲ್ಲಿ ಬಾಯ್ಲರ್ ಅನ್ನು ಕಂಪನಿಯ ಒಳಗಿನಿಂದ ಹೊರಗಡೆ ತಂದಾಗ, ಸಿಡಿತ ಉಂಟಾಗಿದೆ, ಸ್ಫೋಟದ ರಭಸಕ್ಕೆ, ಬಾಯ್ಲರ್ ನ ಕಬ್ಬಿಣದ ತುಂಡುಗಳು, ಬೋಲ್ಟ್ ಗಳು ಬಹು ದೂರದವರೆಗೆ ಹಾರಿ ಬಿದ್ದಿದೆ.
ಒಂದು ವರ್ಷದ ಹಿಂದೆಯೂ ಸಹ, ಇದೇ ಕಂಪನಿಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಪದೇ ಪದೇ ಸಾವಿನ ಘಟನೆಗಳು ಮರುಕಳಿಸುತ್ತಿರುವುದು, ಸುರಕ್ಷತಾ ಕ್ರಮದ ವೈಫಲ್ಯವನ್ನು ಎದ್ದು ತೋರಿಸುವಂತಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಜಗದೀಶ್, ಆರಕ್ಷಕ ನಿರೀಕ್ಷಕ ರವಿ.ಎಸ್. ಪಿಎಸ್ಐ ವಿಜಯಕುಮಾರಿ, ಎಎಸ್ಐ ವೀರಭದ್ರಯ್ಯ, ಮಲ್ಲೇಶ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…