ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ: ಕಾರ್ಮಿಕನೋರ್ವ ಸಾವು: ಮತ್ತೋರ್ವನ ಸ್ಥಿತಿ ಚಿಂತಾಜನಕ

ನೆಲಮಂಗಲ : ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಸ್ಫೋಟದಲ್ಲಿ ಗಾಯಗೊಂಡ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಅರ್ಗ್ಯಾನಿಕ್ ಅರೋಮ್ಯಾಟಿಕ್ಸ್. ಪ್ರೈ.ಲಿ ಕಂಪನಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕ ಚಿಗಮಲ್ಲಪ್ಪ ಅಲಿಯಾಸ್ ಮಂಜಪ್ಪ(40) ಸ್ಥಳದಲ್ಲೇ ಮೃತನಾಗಿದ್ದಾನೆ.

ಚಿಗಮಲ್ಲಪ್ಪ ಮೂಲತಃ ವಿಜಯ ನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕುಂಚೂರು ಗ್ರಾಮದವನಾಗಿದ್ದು, ಟಿ.ದಾಸರಹಳ್ಳಿಯಲ್ಲಿ ವಾಸವಿದ್ದ ಎನ್ನಲಾಗಿದೆ.

ಮತ್ತೋರ್ವ ಕಾರ್ಮಿಕ ಮನೋಜ್(29) ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ, ಮನೋಜ್ ತುಮಕೂರು ಜಿಲ್ಲೆಯ ಬೆಳ್ಳಾವಿ ಸಮೀಪದ ಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ.

ಘಟನೆ ಹಿನ್ನಲೆ: ರಾಸಾಯನಿಕ ಬಳಕೆ ಮಾಡುವ ಕಂಪನಿಯಲ್ಲಿ, ಮುಂಜಾಗ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸದ ಕಾರಣದಿಂದಾಗಿ  ತೀವ್ರವಾದ ಸ್ಫೋಟ ಉಂಟಾಗಿದೆ.

ಬಾಯ್ಲರ್ ಮಿಷಿನ್ ಗಳು ತುಕ್ಕು ಹಿಡಿದಿದ್ದು, ಸ್ಪೋಟದ ರಭಸ ತೀವ್ರವಾಗಿದ್ದುದರಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬಾಯ್ಲರ್ ರೀಪೇರಿ ಇದ್ದ ಹಿನ್ನೆಲೆಯಲ್ಲಿ ಬಾಯ್ಲರ್ ಅನ್ನು ಕಂಪನಿಯ ಒಳಗಿನಿಂದ ಹೊರಗಡೆ ತಂದಾಗ, ಸಿಡಿತ ಉಂಟಾಗಿದೆ, ಸ್ಫೋಟದ ರಭಸಕ್ಕೆ, ಬಾಯ್ಲರ್ ನ ಕಬ್ಬಿಣದ ತುಂಡುಗಳು, ಬೋಲ್ಟ್ ಗಳು ಬಹು ದೂರದವರೆಗೆ ಹಾರಿ ಬಿದ್ದಿದೆ.

ಒಂದು ವರ್ಷದ ಹಿಂದೆಯೂ ಸಹ, ಇದೇ ಕಂಪನಿಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಪದೇ ಪದೇ ಸಾವಿನ ಘಟನೆಗಳು ಮರುಕಳಿಸುತ್ತಿರುವುದು, ಸುರಕ್ಷತಾ ಕ್ರಮದ ವೈಫಲ್ಯವನ್ನು ಎದ್ದು ತೋರಿಸುವಂತಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಜಗದೀಶ್, ಆರಕ್ಷಕ ನಿರೀಕ್ಷಕ ರವಿ.ಎಸ್. ಪಿಎಸ್ಐ ವಿಜಯಕುಮಾರಿ, ಎಎಸ್ಐ ವೀರಭದ್ರಯ್ಯ, ಮಲ್ಲೇಶ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

4 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago