ನೆಲಮಂಗಲ : ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಸ್ಫೋಟದಲ್ಲಿ ಗಾಯಗೊಂಡ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಅರ್ಗ್ಯಾನಿಕ್ ಅರೋಮ್ಯಾಟಿಕ್ಸ್. ಪ್ರೈ.ಲಿ ಕಂಪನಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕ ಚಿಗಮಲ್ಲಪ್ಪ ಅಲಿಯಾಸ್ ಮಂಜಪ್ಪ(40) ಸ್ಥಳದಲ್ಲೇ ಮೃತನಾಗಿದ್ದಾನೆ.
ಚಿಗಮಲ್ಲಪ್ಪ ಮೂಲತಃ ವಿಜಯ ನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕುಂಚೂರು ಗ್ರಾಮದವನಾಗಿದ್ದು, ಟಿ.ದಾಸರಹಳ್ಳಿಯಲ್ಲಿ ವಾಸವಿದ್ದ ಎನ್ನಲಾಗಿದೆ.
ಮತ್ತೋರ್ವ ಕಾರ್ಮಿಕ ಮನೋಜ್(29) ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ, ಮನೋಜ್ ತುಮಕೂರು ಜಿಲ್ಲೆಯ ಬೆಳ್ಳಾವಿ ಸಮೀಪದ ಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ.
ಘಟನೆ ಹಿನ್ನಲೆ: ರಾಸಾಯನಿಕ ಬಳಕೆ ಮಾಡುವ ಕಂಪನಿಯಲ್ಲಿ, ಮುಂಜಾಗ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸದ ಕಾರಣದಿಂದಾಗಿ ತೀವ್ರವಾದ ಸ್ಫೋಟ ಉಂಟಾಗಿದೆ.
ಬಾಯ್ಲರ್ ಮಿಷಿನ್ ಗಳು ತುಕ್ಕು ಹಿಡಿದಿದ್ದು, ಸ್ಪೋಟದ ರಭಸ ತೀವ್ರವಾಗಿದ್ದುದರಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಬಾಯ್ಲರ್ ರೀಪೇರಿ ಇದ್ದ ಹಿನ್ನೆಲೆಯಲ್ಲಿ ಬಾಯ್ಲರ್ ಅನ್ನು ಕಂಪನಿಯ ಒಳಗಿನಿಂದ ಹೊರಗಡೆ ತಂದಾಗ, ಸಿಡಿತ ಉಂಟಾಗಿದೆ, ಸ್ಫೋಟದ ರಭಸಕ್ಕೆ, ಬಾಯ್ಲರ್ ನ ಕಬ್ಬಿಣದ ತುಂಡುಗಳು, ಬೋಲ್ಟ್ ಗಳು ಬಹು ದೂರದವರೆಗೆ ಹಾರಿ ಬಿದ್ದಿದೆ.
ಒಂದು ವರ್ಷದ ಹಿಂದೆಯೂ ಸಹ, ಇದೇ ಕಂಪನಿಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಪದೇ ಪದೇ ಸಾವಿನ ಘಟನೆಗಳು ಮರುಕಳಿಸುತ್ತಿರುವುದು, ಸುರಕ್ಷತಾ ಕ್ರಮದ ವೈಫಲ್ಯವನ್ನು ಎದ್ದು ತೋರಿಸುವಂತಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಜಗದೀಶ್, ಆರಕ್ಷಕ ನಿರೀಕ್ಷಕ ರವಿ.ಎಸ್. ಪಿಎಸ್ಐ ವಿಜಯಕುಮಾರಿ, ಎಎಸ್ಐ ವೀರಭದ್ರಯ್ಯ, ಮಲ್ಲೇಶ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…