ದೊಡ್ಡಬಳ್ಳಾಪುರ: ಜಾನುವಾರುಗಳಲ್ಲಿ ಚರ್ಮಗಂಟು ರೋಗ ಬಾರದಂತೆ ತಡೆಯಲು ಲಸಿಕೆ ನೀಡುತ್ತಿದ್ದೇವೆ, ಗಾಳಿ, ನೀರಿನ ಮೂಲಕ ಹರಡುವ ಈ ರೋಗದ ಬಗ್ಗೆ ಎಚ್ಚರಿಕೆ ವಹಿಸುವುದು ಅತಿ ಅಗತ್ಯ ಎಂದು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಮಂಜುನಾಥ ಹೇಳಿದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ವತಿಯಿಂದ ಹಮ್ಮಿಕೊಂಡಿದ್ದ ರಾಸುಗಳಿಗೆ ಉಚಿತ ಲಸಿಕೆ ಮತ್ತು ಪಶು ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಚರ್ಮ ಗಂಟು ರೋಗ ಗಾಳಿ, ನೀರಿನ ಮೂಲಕ ಹರಡುವ ಸಾಧ್ಯತೆ ಇರಬಹುದು, ಹೀಗಾಗಿ ರೈತರು ಒಂದು ಊರಿನಿಂದ ಮತ್ತೊಂದು ಊರಿಗೆ ಪಶುಗಳನ್ನು ಸಾಗಾಣಿಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದರು.
ಕಚ್ಚುವ ನೊಣ, ಸೊಳ್ಳೆಗಳ ಮೂಲಕ ಹರಡುವ ಕಾರಣ ಜಾಗೃತೆ ವಹಿಸಿದರೆ ಒಳ್ಳೆಯದು ಜೊತೆಗೆ ಜಾನುವಾರುಗಳ ಹಟ್ಟಿಯನ್ನು ಸ್ವಚ್ಛವಾಗಿಡುವುದು, ಕೊಟ್ಟಿಗೆಯ ಸಮೀಪ ಗೊಬ್ಬರದ ರಾಶಿ ಹಾಕದೆ ಸೊಳ್ಳೆಯ ನಿಯಂತ್ರಣ ಮಾಡಬೇಕು. ಇನ್ನು ಗೊಬ್ಬರದ ನೀರು ಶೇಖರಣೆ ಆಗುವ ಜಾಗದಲ್ಲಿ ಕೀಟನಾಶಕ ಅಥವಾ ಸೀಮೆ ಎಣ್ಣೆಯನ್ನು ಹಾಕಿ ಮೊಟ್ಟೆ ಬೆಳೆಯದಂತೆ ನೋಡಿಕೊಳ್ಳಬೇಕು ಎಂದರು.
ಸಂಘದ ಮುಖ್ಯ ಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ, ನಿರ್ದೇಶಕರಾದ ಎಂ.ಮಾರಪ್ಪ, ನಾರಾಯಣಪ್ಪ , ಸಂಘದ ಸಿಬ್ಬಂದಿ ಶರಣ್ ರಾಜ್ ಎಂ ಸೇರಿದಂತೆ ಮತ್ತಿತರರು ಹಾಜರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…