ದೊಡ್ಡಬಳ್ಳಾಪುರ: ಜಾನುವಾರುಗಳಲ್ಲಿ ಚರ್ಮಗಂಟು ರೋಗ ಬಾರದಂತೆ ತಡೆಯಲು ಲಸಿಕೆ ನೀಡುತ್ತಿದ್ದೇವೆ, ಗಾಳಿ, ನೀರಿನ ಮೂಲಕ ಹರಡುವ ಈ ರೋಗದ ಬಗ್ಗೆ ಎಚ್ಚರಿಕೆ ವಹಿಸುವುದು ಅತಿ ಅಗತ್ಯ ಎಂದು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಮಂಜುನಾಥ ಹೇಳಿದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ವತಿಯಿಂದ ಹಮ್ಮಿಕೊಂಡಿದ್ದ ರಾಸುಗಳಿಗೆ ಉಚಿತ ಲಸಿಕೆ ಮತ್ತು ಪಶು ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಚರ್ಮ ಗಂಟು ರೋಗ ಗಾಳಿ, ನೀರಿನ ಮೂಲಕ ಹರಡುವ ಸಾಧ್ಯತೆ ಇರಬಹುದು, ಹೀಗಾಗಿ ರೈತರು ಒಂದು ಊರಿನಿಂದ ಮತ್ತೊಂದು ಊರಿಗೆ ಪಶುಗಳನ್ನು ಸಾಗಾಣಿಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದರು.
ಕಚ್ಚುವ ನೊಣ, ಸೊಳ್ಳೆಗಳ ಮೂಲಕ ಹರಡುವ ಕಾರಣ ಜಾಗೃತೆ ವಹಿಸಿದರೆ ಒಳ್ಳೆಯದು ಜೊತೆಗೆ ಜಾನುವಾರುಗಳ ಹಟ್ಟಿಯನ್ನು ಸ್ವಚ್ಛವಾಗಿಡುವುದು, ಕೊಟ್ಟಿಗೆಯ ಸಮೀಪ ಗೊಬ್ಬರದ ರಾಶಿ ಹಾಕದೆ ಸೊಳ್ಳೆಯ ನಿಯಂತ್ರಣ ಮಾಡಬೇಕು. ಇನ್ನು ಗೊಬ್ಬರದ ನೀರು ಶೇಖರಣೆ ಆಗುವ ಜಾಗದಲ್ಲಿ ಕೀಟನಾಶಕ ಅಥವಾ ಸೀಮೆ ಎಣ್ಣೆಯನ್ನು ಹಾಕಿ ಮೊಟ್ಟೆ ಬೆಳೆಯದಂತೆ ನೋಡಿಕೊಳ್ಳಬೇಕು ಎಂದರು.
ಸಂಘದ ಮುಖ್ಯ ಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ, ನಿರ್ದೇಶಕರಾದ ಎಂ.ಮಾರಪ್ಪ, ನಾರಾಯಣಪ್ಪ , ಸಂಘದ ಸಿಬ್ಬಂದಿ ಶರಣ್ ರಾಜ್ ಎಂ ಸೇರಿದಂತೆ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…