ರಾಸುಗಳಿಗೆ ಲಸಿಕೆ ಹಾಕಿಸಿ, ಜಾನುವಾರುಗಳನ್ನು ರಕ್ಷಿಸಿ-ವೈದ್ಯಾಧಿಕಾರಿ ಮಂಜುನಾಥ

ದೊಡ್ಡಬಳ್ಳಾಪುರ: ಜಾನುವಾರುಗಳಲ್ಲಿ ಚರ್ಮಗಂಟು ರೋಗ ಬಾರದಂತೆ ತಡೆಯಲು ಲಸಿಕೆ ನೀಡುತ್ತಿದ್ದೇವೆ, ಗಾಳಿ, ನೀರಿನ ಮೂಲಕ ಹರಡುವ ಈ ರೋಗದ ಬಗ್ಗೆ ಎಚ್ಚರಿಕೆ ವಹಿಸುವುದು ಅತಿ ಅಗತ್ಯ ಎಂದು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಮಂಜುನಾಥ ಹೇಳಿದರು.

ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ವತಿಯಿಂದ ಹಮ್ಮಿಕೊಂಡಿದ್ದ ರಾಸುಗಳಿಗೆ ಉಚಿತ ಲಸಿಕೆ ಮತ್ತು ಪಶು ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಚರ್ಮ ಗಂಟು ರೋಗ ಗಾಳಿ, ನೀರಿನ ಮೂಲಕ ಹರಡುವ ಸಾಧ್ಯತೆ ಇರಬಹುದು, ಹೀಗಾಗಿ ರೈತರು ಒಂದು ಊರಿನಿಂದ ಮತ್ತೊಂದು ಊರಿಗೆ ಪಶುಗಳನ್ನು ಸಾಗಾಣಿಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದರು.

ಕಚ್ಚುವ ನೊಣ, ಸೊಳ್ಳೆಗಳ ಮೂಲಕ ಹರಡುವ ಕಾರಣ ಜಾಗೃತೆ ವಹಿಸಿದರೆ ಒಳ್ಳೆಯದು ಜೊತೆಗೆ ಜಾನುವಾರುಗಳ ಹಟ್ಟಿಯನ್ನು ಸ್ವಚ್ಛವಾಗಿಡುವುದು, ಕೊಟ್ಟಿಗೆಯ ಸಮೀಪ ಗೊಬ್ಬರದ ರಾಶಿ ಹಾಕದೆ ಸೊಳ್ಳೆಯ ನಿಯಂತ್ರಣ ಮಾಡಬೇಕು. ಇನ್ನು ಗೊಬ್ಬರದ ನೀರು ಶೇಖರಣೆ ಆಗುವ ಜಾಗದಲ್ಲಿ ಕೀಟನಾಶಕ ಅಥವಾ ಸೀಮೆ ಎಣ್ಣೆಯನ್ನು ಹಾಕಿ ಮೊಟ್ಟೆ ಬೆಳೆಯದಂತೆ ನೋಡಿಕೊಳ್ಳಬೇಕು ಎಂದರು.

ಸಂಘದ ಮುಖ್ಯ ಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ, ನಿರ್ದೇಶಕರಾದ ಎಂ.ಮಾರಪ್ಪ, ನಾರಾಯಣಪ್ಪ , ಸಂಘದ ಸಿಬ್ಬಂದಿ ಶರಣ್ ರಾಜ್ ಎಂ ಸೇರಿದಂತೆ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

10 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

19 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

23 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago