ದೊಡ್ಡಬಳ್ಳಾಪುರ: ಜಾನುವಾರುಗಳಲ್ಲಿ ಚರ್ಮಗಂಟು ರೋಗ ಬಾರದಂತೆ ತಡೆಯಲು ಲಸಿಕೆ ನೀಡುತ್ತಿದ್ದೇವೆ, ಗಾಳಿ, ನೀರಿನ ಮೂಲಕ ಹರಡುವ ಈ ರೋಗದ ಬಗ್ಗೆ ಎಚ್ಚರಿಕೆ ವಹಿಸುವುದು ಅತಿ ಅಗತ್ಯ ಎಂದು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಮಂಜುನಾಥ ಹೇಳಿದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ವತಿಯಿಂದ ಹಮ್ಮಿಕೊಂಡಿದ್ದ ರಾಸುಗಳಿಗೆ ಉಚಿತ ಲಸಿಕೆ ಮತ್ತು ಪಶು ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಚರ್ಮ ಗಂಟು ರೋಗ ಗಾಳಿ, ನೀರಿನ ಮೂಲಕ ಹರಡುವ ಸಾಧ್ಯತೆ ಇರಬಹುದು, ಹೀಗಾಗಿ ರೈತರು ಒಂದು ಊರಿನಿಂದ ಮತ್ತೊಂದು ಊರಿಗೆ ಪಶುಗಳನ್ನು ಸಾಗಾಣಿಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದರು.
ಕಚ್ಚುವ ನೊಣ, ಸೊಳ್ಳೆಗಳ ಮೂಲಕ ಹರಡುವ ಕಾರಣ ಜಾಗೃತೆ ವಹಿಸಿದರೆ ಒಳ್ಳೆಯದು ಜೊತೆಗೆ ಜಾನುವಾರುಗಳ ಹಟ್ಟಿಯನ್ನು ಸ್ವಚ್ಛವಾಗಿಡುವುದು, ಕೊಟ್ಟಿಗೆಯ ಸಮೀಪ ಗೊಬ್ಬರದ ರಾಶಿ ಹಾಕದೆ ಸೊಳ್ಳೆಯ ನಿಯಂತ್ರಣ ಮಾಡಬೇಕು. ಇನ್ನು ಗೊಬ್ಬರದ ನೀರು ಶೇಖರಣೆ ಆಗುವ ಜಾಗದಲ್ಲಿ ಕೀಟನಾಶಕ ಅಥವಾ ಸೀಮೆ ಎಣ್ಣೆಯನ್ನು ಹಾಕಿ ಮೊಟ್ಟೆ ಬೆಳೆಯದಂತೆ ನೋಡಿಕೊಳ್ಳಬೇಕು ಎಂದರು.
ಸಂಘದ ಮುಖ್ಯ ಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ, ನಿರ್ದೇಶಕರಾದ ಎಂ.ಮಾರಪ್ಪ, ನಾರಾಯಣಪ್ಪ , ಸಂಘದ ಸಿಬ್ಬಂದಿ ಶರಣ್ ರಾಜ್ ಎಂ ಸೇರಿದಂತೆ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…