ದೊಡ್ಡಬಳ್ಳಾಪುರ: ಜಾನುವಾರುಗಳಲ್ಲಿ ಚರ್ಮಗಂಟು ರೋಗ ಬಾರದಂತೆ ತಡೆಯಲು ಲಸಿಕೆ ನೀಡುತ್ತಿದ್ದೇವೆ, ಗಾಳಿ, ನೀರಿನ ಮೂಲಕ ಹರಡುವ ಈ ರೋಗದ ಬಗ್ಗೆ ಎಚ್ಚರಿಕೆ ವಹಿಸುವುದು ಅತಿ ಅಗತ್ಯ ಎಂದು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಮಂಜುನಾಥ ಹೇಳಿದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ವತಿಯಿಂದ ಹಮ್ಮಿಕೊಂಡಿದ್ದ ರಾಸುಗಳಿಗೆ ಉಚಿತ ಲಸಿಕೆ ಮತ್ತು ಪಶು ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಚರ್ಮ ಗಂಟು ರೋಗ ಗಾಳಿ, ನೀರಿನ ಮೂಲಕ ಹರಡುವ ಸಾಧ್ಯತೆ ಇರಬಹುದು, ಹೀಗಾಗಿ ರೈತರು ಒಂದು ಊರಿನಿಂದ ಮತ್ತೊಂದು ಊರಿಗೆ ಪಶುಗಳನ್ನು ಸಾಗಾಣಿಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದರು.
ಕಚ್ಚುವ ನೊಣ, ಸೊಳ್ಳೆಗಳ ಮೂಲಕ ಹರಡುವ ಕಾರಣ ಜಾಗೃತೆ ವಹಿಸಿದರೆ ಒಳ್ಳೆಯದು ಜೊತೆಗೆ ಜಾನುವಾರುಗಳ ಹಟ್ಟಿಯನ್ನು ಸ್ವಚ್ಛವಾಗಿಡುವುದು, ಕೊಟ್ಟಿಗೆಯ ಸಮೀಪ ಗೊಬ್ಬರದ ರಾಶಿ ಹಾಕದೆ ಸೊಳ್ಳೆಯ ನಿಯಂತ್ರಣ ಮಾಡಬೇಕು. ಇನ್ನು ಗೊಬ್ಬರದ ನೀರು ಶೇಖರಣೆ ಆಗುವ ಜಾಗದಲ್ಲಿ ಕೀಟನಾಶಕ ಅಥವಾ ಸೀಮೆ ಎಣ್ಣೆಯನ್ನು ಹಾಕಿ ಮೊಟ್ಟೆ ಬೆಳೆಯದಂತೆ ನೋಡಿಕೊಳ್ಳಬೇಕು ಎಂದರು.
ಸಂಘದ ಮುಖ್ಯ ಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ, ನಿರ್ದೇಶಕರಾದ ಎಂ.ಮಾರಪ್ಪ, ನಾರಾಯಣಪ್ಪ , ಸಂಘದ ಸಿಬ್ಬಂದಿ ಶರಣ್ ರಾಜ್ ಎಂ ಸೇರಿದಂತೆ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…