ದೊಡ್ಡಬಳ್ಳಾಪುರ: ಜಾನುವಾರುಗಳಲ್ಲಿ ಚರ್ಮಗಂಟು ರೋಗ ಬಾರದಂತೆ ತಡೆಯಲು ಲಸಿಕೆ ನೀಡುತ್ತಿದ್ದೇವೆ, ಗಾಳಿ, ನೀರಿನ ಮೂಲಕ ಹರಡುವ ಈ ರೋಗದ ಬಗ್ಗೆ ಎಚ್ಚರಿಕೆ ವಹಿಸುವುದು ಅತಿ ಅಗತ್ಯ ಎಂದು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಮಂಜುನಾಥ ಹೇಳಿದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯದ ವತಿಯಿಂದ ಹಮ್ಮಿಕೊಂಡಿದ್ದ ರಾಸುಗಳಿಗೆ ಉಚಿತ ಲಸಿಕೆ ಮತ್ತು ಪಶು ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಚರ್ಮ ಗಂಟು ರೋಗ ಗಾಳಿ, ನೀರಿನ ಮೂಲಕ ಹರಡುವ ಸಾಧ್ಯತೆ ಇರಬಹುದು, ಹೀಗಾಗಿ ರೈತರು ಒಂದು ಊರಿನಿಂದ ಮತ್ತೊಂದು ಊರಿಗೆ ಪಶುಗಳನ್ನು ಸಾಗಾಣಿಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದರು.
ಕಚ್ಚುವ ನೊಣ, ಸೊಳ್ಳೆಗಳ ಮೂಲಕ ಹರಡುವ ಕಾರಣ ಜಾಗೃತೆ ವಹಿಸಿದರೆ ಒಳ್ಳೆಯದು ಜೊತೆಗೆ ಜಾನುವಾರುಗಳ ಹಟ್ಟಿಯನ್ನು ಸ್ವಚ್ಛವಾಗಿಡುವುದು, ಕೊಟ್ಟಿಗೆಯ ಸಮೀಪ ಗೊಬ್ಬರದ ರಾಶಿ ಹಾಕದೆ ಸೊಳ್ಳೆಯ ನಿಯಂತ್ರಣ ಮಾಡಬೇಕು. ಇನ್ನು ಗೊಬ್ಬರದ ನೀರು ಶೇಖರಣೆ ಆಗುವ ಜಾಗದಲ್ಲಿ ಕೀಟನಾಶಕ ಅಥವಾ ಸೀಮೆ ಎಣ್ಣೆಯನ್ನು ಹಾಕಿ ಮೊಟ್ಟೆ ಬೆಳೆಯದಂತೆ ನೋಡಿಕೊಳ್ಳಬೇಕು ಎಂದರು.
ಸಂಘದ ಮುಖ್ಯ ಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ, ನಿರ್ದೇಶಕರಾದ ಎಂ.ಮಾರಪ್ಪ, ನಾರಾಯಣಪ್ಪ , ಸಂಘದ ಸಿಬ್ಬಂದಿ ಶರಣ್ ರಾಜ್ ಎಂ ಸೇರಿದಂತೆ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…