ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಮರು‌ಸ್ಥಾಪನೆ: ನಗು ನಗುತಾ ಲೋಕಸಭೆ ಪ್ರವೇಶಿಸಿದ ರಾಹುಲ್ ಗಾಂಧಿ

ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ನಗು‌ನಗುತಾ ರಾಹುಲ್ ಗಾಂಧಿ ಅವರು ಸಂಸತ್ತನ್ನು ತಲುಪಿದರು. ಕಾಂಗ್ರೆಸ್ ಕಚೇರಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ. ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಸಂಸತ್ತಿಗೆ ಆಗಮಿಸಿದ ಕೂಡಲೇ ಕಾಂಗ್ರೆಸ್ ನಾಯಕರೊಂದಿಗೆ ಆವರಣದಲ್ಲಿ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿ ಆಶೀರ್ವಾದ ಪಡೆದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವದ ಅಮಾನತು ಆಗಸ್ಟ್ 7 ರಂದು ಹಿಂತೆಗೆದುಕೊಳ್ಳಲಾಯಿತು ಮತ್ತು ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಹೊರಡಿಸಿದ ನಂತರ ಕೇರಳದ ವಯನಾಡಿನ ಸಂಸದ ಎಂಬ ಸ್ಥಾನಮಾನವನ್ನು ಪುನಃಸ್ಥಾಪಿಸಲಾಗಿದೆ.

ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯವು ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದೆ.

ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು.

ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿಯಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದ ಹಿನ್ನೆಲೆ ಲೋಕಸಭೆ ಸದಸ್ಯತ್ವ ಮರುಸ್ಥಾಪಿಸಲಾಗಿದೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

11 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

11 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

19 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago