ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ನಗುನಗುತಾ ರಾಹುಲ್ ಗಾಂಧಿ ಅವರು ಸಂಸತ್ತನ್ನು ತಲುಪಿದರು. ಕಾಂಗ್ರೆಸ್ ಕಚೇರಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ. ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಸಂಸತ್ತಿಗೆ ಆಗಮಿಸಿದ ಕೂಡಲೇ ಕಾಂಗ್ರೆಸ್ ನಾಯಕರೊಂದಿಗೆ ಆವರಣದಲ್ಲಿ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿ ಆಶೀರ್ವಾದ ಪಡೆದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವದ ಅಮಾನತು ಆಗಸ್ಟ್ 7 ರಂದು ಹಿಂತೆಗೆದುಕೊಳ್ಳಲಾಯಿತು ಮತ್ತು ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಹೊರಡಿಸಿದ ನಂತರ ಕೇರಳದ ವಯನಾಡಿನ ಸಂಸದ ಎಂಬ ಸ್ಥಾನಮಾನವನ್ನು ಪುನಃಸ್ಥಾಪಿಸಲಾಗಿದೆ.
ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು.
ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿಯಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ತಡೆಯಾಜ್ಞೆ ವಿಧಿಸಿದ ಹಿನ್ನೆಲೆ ಲೋಕಸಭೆ ಸದಸ್ಯತ್ವ ಮರುಸ್ಥಾಪಿಸಲಾಗಿದೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…