ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಮರು‌ಸ್ಥಾಪನೆ: ನಗು ನಗುತಾ ಲೋಕಸಭೆ ಪ್ರವೇಶಿಸಿದ ರಾಹುಲ್ ಗಾಂಧಿ

ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ನಗು‌ನಗುತಾ ರಾಹುಲ್ ಗಾಂಧಿ ಅವರು ಸಂಸತ್ತನ್ನು ತಲುಪಿದರು. ಕಾಂಗ್ರೆಸ್ ಕಚೇರಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ. ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಸಂಸತ್ತಿಗೆ ಆಗಮಿಸಿದ ಕೂಡಲೇ ಕಾಂಗ್ರೆಸ್ ನಾಯಕರೊಂದಿಗೆ ಆವರಣದಲ್ಲಿ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿ ಆಶೀರ್ವಾದ ಪಡೆದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವದ ಅಮಾನತು ಆಗಸ್ಟ್ 7 ರಂದು ಹಿಂತೆಗೆದುಕೊಳ್ಳಲಾಯಿತು ಮತ್ತು ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಹೊರಡಿಸಿದ ನಂತರ ಕೇರಳದ ವಯನಾಡಿನ ಸಂಸದ ಎಂಬ ಸ್ಥಾನಮಾನವನ್ನು ಪುನಃಸ್ಥಾಪಿಸಲಾಗಿದೆ.

ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯವು ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದೆ.

ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು.

ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿಯಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದ ಹಿನ್ನೆಲೆ ಲೋಕಸಭೆ ಸದಸ್ಯತ್ವ ಮರುಸ್ಥಾಪಿಸಲಾಗಿದೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago