ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ನಗುನಗುತಾ ರಾಹುಲ್ ಗಾಂಧಿ ಅವರು ಸಂಸತ್ತನ್ನು ತಲುಪಿದರು. ಕಾಂಗ್ರೆಸ್ ಕಚೇರಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ. ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಸಂಸತ್ತಿಗೆ ಆಗಮಿಸಿದ ಕೂಡಲೇ ಕಾಂಗ್ರೆಸ್ ನಾಯಕರೊಂದಿಗೆ ಆವರಣದಲ್ಲಿ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿ ಆಶೀರ್ವಾದ ಪಡೆದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವದ ಅಮಾನತು ಆಗಸ್ಟ್ 7 ರಂದು ಹಿಂತೆಗೆದುಕೊಳ್ಳಲಾಯಿತು ಮತ್ತು ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಹೊರಡಿಸಿದ ನಂತರ ಕೇರಳದ ವಯನಾಡಿನ ಸಂಸದ ಎಂಬ ಸ್ಥಾನಮಾನವನ್ನು ಪುನಃಸ್ಥಾಪಿಸಲಾಗಿದೆ.
ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು.
ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿಯಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ತಡೆಯಾಜ್ಞೆ ವಿಧಿಸಿದ ಹಿನ್ನೆಲೆ ಲೋಕಸಭೆ ಸದಸ್ಯತ್ವ ಮರುಸ್ಥಾಪಿಸಲಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…