ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಮರು‌ಸ್ಥಾಪನೆ: ನಗು ನಗುತಾ ಲೋಕಸಭೆ ಪ್ರವೇಶಿಸಿದ ರಾಹುಲ್ ಗಾಂಧಿ

ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ನಗು‌ನಗುತಾ ರಾಹುಲ್ ಗಾಂಧಿ ಅವರು ಸಂಸತ್ತನ್ನು ತಲುಪಿದರು. ಕಾಂಗ್ರೆಸ್ ಕಚೇರಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ. ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಸಂಸತ್ತಿಗೆ ಆಗಮಿಸಿದ ಕೂಡಲೇ ಕಾಂಗ್ರೆಸ್ ನಾಯಕರೊಂದಿಗೆ ಆವರಣದಲ್ಲಿ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿ ಆಶೀರ್ವಾದ ಪಡೆದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವದ ಅಮಾನತು ಆಗಸ್ಟ್ 7 ರಂದು ಹಿಂತೆಗೆದುಕೊಳ್ಳಲಾಯಿತು ಮತ್ತು ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಹೊರಡಿಸಿದ ನಂತರ ಕೇರಳದ ವಯನಾಡಿನ ಸಂಸದ ಎಂಬ ಸ್ಥಾನಮಾನವನ್ನು ಪುನಃಸ್ಥಾಪಿಸಲಾಗಿದೆ.

ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯವು ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದೆ.

ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು.

ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿಯಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದ ಹಿನ್ನೆಲೆ ಲೋಕಸಭೆ ಸದಸ್ಯತ್ವ ಮರುಸ್ಥಾಪಿಸಲಾಗಿದೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago