ರಾಹುಲ್ – ಜಡೇಜಾ ಭರ್ಜರಿ ಜೊತೆಯಾಟ, ಭಾರತಕ್ಕೆ 5 ವಿಕೆಟ್ ಜಯ

ಮುಂಬೈ : ನಿಧಾನಗತಿ ಹಾಗೂ ಬೌಲಿಂಗ್ ಸ್ನೇಹಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ರಾಹುಲ್ ಹಾಗೂ ಜಡೇಜಾ ಅವರ ಭರ್ಜರಿ ಶತಕದ ಜೊತೆಯಾಟ ನೆರವಿನಿಂದ ಭಾರತ ಐದು ವಿಕೆಟ್ ಭರ್ಜರಿ ಗೆಲುವು ಪಡೆಯಿತು.

ನಾಯಕ ರೋಹಿತ್ ಶರ್ಮಾ ಅವರ ಅನಪಸ್ಥಿಯಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಉತ್ತಮ ನಿರ್ಧಾರ ಕೈಗೊಂಡರು, ನಾಯಕನ ನಂಬಿಕೆ ಉಳಿಸಿದ ಬೌಲಿಂಗ್ ವಿಭಾಗ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ತಂಡದ ಆರಂಭ ಉತ್ತಮವಾಗಿರಲಿಲ್ಲ, ಮೊಹಮ್ಮದ್ ಸಿರಾಜ್ ಅವರು ಮೊದಲ ಬಲಿ ಪಡಿದರು, ಆರಂಭಿಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ವಿಕೆಟ್ ಒಪ್ಪಿಸಿದರು, ನಂತರ ಬಂದ ಸ್ಟೀವನ್ ಸ್ಮಿತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ ಉತ್ತಮ ರನ್ ಗಳಿಸಿದರು.

ಮಿಚೆಲ್ ಮಾರ್ಷ್(81), ನಾಯಕ ಸ್ಟೀವನ್ ಸ್ಮಿತ್ (22) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಶ್ ಇಂಗ್ಲೀಸ್ (26). ಅತ್ಯಲ್ಪ ಕಾಣಿಕೆ ನೀಡಿದರು, ಇದರ ಫಲವಾಗಿ ಆಸ್ಟ್ರೇಲಿಯಾ 188 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು, ಭಾರತದ ಪರವಾಗಿ ಮೊಹಮ್ಮದ್ ಶಮಿ ಹಾಗೂ ಸಿರಾಜ್ ತಲಾ ಮೂರು ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಭಾರತ ತಂಡ ಆರಂಭ ಉತ್ತಮವಾಗಿರಲಿಲ್ಲ ಇಶಾನ್ ಕಿಶನ್ (3), ವಿರಾಟ್ ಕೊಹ್ಲಿ (4), ಸೂರ್ಯಕುಮಾರ್ ಯಾದವ್ (0) ಬೇಗನೇ ವಿಕೆಟ್ ಒಪ್ಪಿಸಿದರು, ನಂತರ ಬಂದ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಜೋಡಿ ಮುರಿಯದ ಐದನೇ ವಿಕೆಟ್ ಗೆ 189 ರನ್ ಗುರಿ ತಲುಪಿದರು.

ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆ. ಎಲ್. ರಾಹುಲ್ (75) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (45) ಉತ್ತಮ ಆಟ ಪ್ರದರ್ಶಿಸುವ ಮೂಲಕ ಗುರಿ ಬೆನ್ನತ್ತಿದರು. ಎರಡು ವಿಕೆಟ್ ಪಡೆದು ಆಲ್ ರೌಂಡರ್ ಆಟವಾಡಿದ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

34 minutes ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

5 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

7 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

19 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

19 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

22 hours ago