ರಾಹುಲ್ – ಜಡೇಜಾ ಭರ್ಜರಿ ಜೊತೆಯಾಟ, ಭಾರತಕ್ಕೆ 5 ವಿಕೆಟ್ ಜಯ

ಮುಂಬೈ : ನಿಧಾನಗತಿ ಹಾಗೂ ಬೌಲಿಂಗ್ ಸ್ನೇಹಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ರಾಹುಲ್ ಹಾಗೂ ಜಡೇಜಾ ಅವರ ಭರ್ಜರಿ ಶತಕದ ಜೊತೆಯಾಟ ನೆರವಿನಿಂದ ಭಾರತ ಐದು ವಿಕೆಟ್ ಭರ್ಜರಿ ಗೆಲುವು ಪಡೆಯಿತು.

ನಾಯಕ ರೋಹಿತ್ ಶರ್ಮಾ ಅವರ ಅನಪಸ್ಥಿಯಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಉತ್ತಮ ನಿರ್ಧಾರ ಕೈಗೊಂಡರು, ನಾಯಕನ ನಂಬಿಕೆ ಉಳಿಸಿದ ಬೌಲಿಂಗ್ ವಿಭಾಗ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ತಂಡದ ಆರಂಭ ಉತ್ತಮವಾಗಿರಲಿಲ್ಲ, ಮೊಹಮ್ಮದ್ ಸಿರಾಜ್ ಅವರು ಮೊದಲ ಬಲಿ ಪಡಿದರು, ಆರಂಭಿಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ವಿಕೆಟ್ ಒಪ್ಪಿಸಿದರು, ನಂತರ ಬಂದ ಸ್ಟೀವನ್ ಸ್ಮಿತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ ಉತ್ತಮ ರನ್ ಗಳಿಸಿದರು.

ಮಿಚೆಲ್ ಮಾರ್ಷ್(81), ನಾಯಕ ಸ್ಟೀವನ್ ಸ್ಮಿತ್ (22) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಶ್ ಇಂಗ್ಲೀಸ್ (26). ಅತ್ಯಲ್ಪ ಕಾಣಿಕೆ ನೀಡಿದರು, ಇದರ ಫಲವಾಗಿ ಆಸ್ಟ್ರೇಲಿಯಾ 188 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು, ಭಾರತದ ಪರವಾಗಿ ಮೊಹಮ್ಮದ್ ಶಮಿ ಹಾಗೂ ಸಿರಾಜ್ ತಲಾ ಮೂರು ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಭಾರತ ತಂಡ ಆರಂಭ ಉತ್ತಮವಾಗಿರಲಿಲ್ಲ ಇಶಾನ್ ಕಿಶನ್ (3), ವಿರಾಟ್ ಕೊಹ್ಲಿ (4), ಸೂರ್ಯಕುಮಾರ್ ಯಾದವ್ (0) ಬೇಗನೇ ವಿಕೆಟ್ ಒಪ್ಪಿಸಿದರು, ನಂತರ ಬಂದ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಜೋಡಿ ಮುರಿಯದ ಐದನೇ ವಿಕೆಟ್ ಗೆ 189 ರನ್ ಗುರಿ ತಲುಪಿದರು.

ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆ. ಎಲ್. ರಾಹುಲ್ (75) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (45) ಉತ್ತಮ ಆಟ ಪ್ರದರ್ಶಿಸುವ ಮೂಲಕ ಗುರಿ ಬೆನ್ನತ್ತಿದರು. ಎರಡು ವಿಕೆಟ್ ಪಡೆದು ಆಲ್ ರೌಂಡರ್ ಆಟವಾಡಿದ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

5 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

16 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

17 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

17 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

19 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

22 hours ago