ರಾಹುಲ್ – ಜಡೇಜಾ ಭರ್ಜರಿ ಜೊತೆಯಾಟ, ಭಾರತಕ್ಕೆ 5 ವಿಕೆಟ್ ಜಯ

ಮುಂಬೈ : ನಿಧಾನಗತಿ ಹಾಗೂ ಬೌಲಿಂಗ್ ಸ್ನೇಹಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ರಾಹುಲ್ ಹಾಗೂ ಜಡೇಜಾ ಅವರ ಭರ್ಜರಿ ಶತಕದ ಜೊತೆಯಾಟ ನೆರವಿನಿಂದ ಭಾರತ ಐದು ವಿಕೆಟ್ ಭರ್ಜರಿ ಗೆಲುವು ಪಡೆಯಿತು.

ನಾಯಕ ರೋಹಿತ್ ಶರ್ಮಾ ಅವರ ಅನಪಸ್ಥಿಯಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಉತ್ತಮ ನಿರ್ಧಾರ ಕೈಗೊಂಡರು, ನಾಯಕನ ನಂಬಿಕೆ ಉಳಿಸಿದ ಬೌಲಿಂಗ್ ವಿಭಾಗ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ತಂಡದ ಆರಂಭ ಉತ್ತಮವಾಗಿರಲಿಲ್ಲ, ಮೊಹಮ್ಮದ್ ಸಿರಾಜ್ ಅವರು ಮೊದಲ ಬಲಿ ಪಡಿದರು, ಆರಂಭಿಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ವಿಕೆಟ್ ಒಪ್ಪಿಸಿದರು, ನಂತರ ಬಂದ ಸ್ಟೀವನ್ ಸ್ಮಿತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ ಉತ್ತಮ ರನ್ ಗಳಿಸಿದರು.

ಮಿಚೆಲ್ ಮಾರ್ಷ್(81), ನಾಯಕ ಸ್ಟೀವನ್ ಸ್ಮಿತ್ (22) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಶ್ ಇಂಗ್ಲೀಸ್ (26). ಅತ್ಯಲ್ಪ ಕಾಣಿಕೆ ನೀಡಿದರು, ಇದರ ಫಲವಾಗಿ ಆಸ್ಟ್ರೇಲಿಯಾ 188 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು, ಭಾರತದ ಪರವಾಗಿ ಮೊಹಮ್ಮದ್ ಶಮಿ ಹಾಗೂ ಸಿರಾಜ್ ತಲಾ ಮೂರು ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಭಾರತ ತಂಡ ಆರಂಭ ಉತ್ತಮವಾಗಿರಲಿಲ್ಲ ಇಶಾನ್ ಕಿಶನ್ (3), ವಿರಾಟ್ ಕೊಹ್ಲಿ (4), ಸೂರ್ಯಕುಮಾರ್ ಯಾದವ್ (0) ಬೇಗನೇ ವಿಕೆಟ್ ಒಪ್ಪಿಸಿದರು, ನಂತರ ಬಂದ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಜೋಡಿ ಮುರಿಯದ ಐದನೇ ವಿಕೆಟ್ ಗೆ 189 ರನ್ ಗುರಿ ತಲುಪಿದರು.

ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆ. ಎಲ್. ರಾಹುಲ್ (75) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (45) ಉತ್ತಮ ಆಟ ಪ್ರದರ್ಶಿಸುವ ಮೂಲಕ ಗುರಿ ಬೆನ್ನತ್ತಿದರು. ಎರಡು ವಿಕೆಟ್ ಪಡೆದು ಆಲ್ ರೌಂಡರ್ ಆಟವಾಡಿದ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago