ರಾಹುಲ್ ದ್ರಾವಿಡ್ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಪರಿಶೀಲನೆ: ದ್ರಾವಿಡ್ ಹಾಗೂ ಗೂಡ್ಸ್ ಆಟೋ ಚಾಲಕನ‌ ಮಧ್ಯೆ ಸಣ್ಣ ವಾಗ್ವಾದ: ವಾಗ್ವಾದ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್

ಟ್ರಾಫಿಕ್‌ನಲ್ಲಿ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಕಾರಿಗೆ ಗೂಡ್ಸ್ ಆಟೋ ಬಂದು ಗುದ್ದಿದೆ. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಸಂಜೆ 6.30ಕ್ಕೆ ಈ ಘಟನೆ ನಡೆದಿದೆ.

ಕಾರಿಗೆ ಗೂಡ್ಸ್ ಆಟೋ ಟಚ್ ಆದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಪರಿಶೀಲನೆ ನಡೆಸಿದರು. ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ಆಟೋ ಚಾಲಕನ‌ ಮಧ್ಯೆ ಸಣ್ಣ ವಾಗ್ವಾದ ನಡೆದಿದೆ.

ರಾಹುಲ್ ದ್ರಾವಿಡ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ನಿಂದ ಹೈಗ್ರೌಂಡ್ ಕಡೆ ಹೋಗುವಾಗ ಟ್ರಾಫಿಕ್ ಜಾಮ್‌ನಲ್ಲಿ ಕಾರು ನಿಂತಿತ್ತು. ಆಗ ಗೂಡ್ಸ್ ಆಟೋ ಹಿಂದೆಯಿಂದ ಬಂದು ಡಿಕ್ಕಿ ಹೊಡೆದಿದೆ.

ಗೂಡ್ಸ್ ಆಟೋ ಡಿಕ್ಕಿ ಆಗುತ್ತಿದ್ದಂತೆ ಕೆಳಗಿಳಿದ ರಾಹುಲ್ ದ್ರಾವಿಡ್ ಚಾಲಕನ ನಂಬರ್ ಪಡೆದು ಹೊಗಿದ್ದಾರೆ. ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಟೋ ಚಾಲಕನ ಮೇಲೆ ಯಾವುದೇ ದೂರು ದಾಖಲಾಗಿಲ್ಲ. ಆಟೋ ಚಾಲಕನ ಜೊತೆ ರಾಹುಲ್ ದ್ರಾವಿಡ್ ಮಾತುಕತೆ ನಡೆಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

20 minutes ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

11 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

16 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago