ರಾಹುಲ್-ಹಾರ್ದಿಕ್ ಜೊತೆಯಾಟಕ್ಕೆ ಒಲಿದ ಏಕದಿನ ಸರಣಿ!

 

ಕೊಲ್ಕತ್ತಾ: ಹೂಗ್ಲಿ ನದಿಯ ದಡದಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಎರಡು ತಂಡಗಳ ಬೌಲರ್ ಗಳು ಪಾರಮ್ಯದ ನಡುವೆಯೂ ಸಹ ಕನ್ನಡಿಗ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಉತ್ತಮ ಜೊತೆಯಾಟದಿಂದಾಗಿ ಭಾರತ ಏಕದಿನ ಸರಣಿಯನ್ನು ತನ್ನದಾಗಿಸಿಕೊಳ್ಳವ ಮೂಲಕ 2-0 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡದ ಆರಂಭ ಉತ್ತಮವಾಗಿತ್ತು, ಪದಾರ್ಪಣೆ ಪಂದ್ಯವಾಡಿದ ನವನಿಂದು ಫರ್ನಾಂಡೊ (50) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಆವಿಶ್ಕೋ ಫರ್ನಾಂಡೊ (20) ರನ್ ಗಳಿಸಿದ್ದ ಸಂದರ್ಭದಲ್ಲಿ ಮಹಮ್ಮದ್ ಸಿರಾಜ್ ವಿಕೆಟ್ ಉರುಳಿಸಿ ಆಘಾತ ನೀಡಿದರು.

ನಂತರ ಬಂದ ಕುಶಾಲ್ ಮೆಂಡಿಸ್ (34) ರನ್ ಗಳಿಸಿದರೆ ಕೆಳಕ್ರಮಾಂಕದ ಆಟಗಾರ ವೆಲ್ಲಾಗೆ (32) ರನ್ ಗಳಿಸುವ ಮೂಲಕ ತಂಡದ ಮೊತ್ತ 200 ರನ್ ಗಡಿ ದಾಟಿಸಿದರು, ವನಿಂದು ಹಸರಂಗ, ಕರುಣಾರತ್ನೆ ಹಾಗೂ ಬೌಲರ್ ರಜಿತ ತಂಡಕ್ಕೆ ಅತ್ಯಲ್ಪ ಕಾಣಿಕೆ ನೀಡಿದರು.

ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಮಹಮ್ಮದ್ ಸಿರಾಜ್ ತಲಾ ಮೂರು ವಿಕೆಟ್ ಪಡೆದು ಪ್ರವಾಸಿ ತಂಡಕ್ಕೆ ಆಘಾತ ನೀಡಿದರು, ವೇಗದ ಬೌಲಿಂಗ್ ಮೂಲಕ ಪ್ರವಾಸಿ ಪಡೆಯನ್ನು ಕಾಡಿದ ಉಮ್ರಾನ್ ಮಲ್ಲಿಕ್ ಎರಡು ವಿಕೆಟ್ ಹಾಗೂ ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು.

216 ರನ್ ಗಳ ಗುರಿ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ಉತ್ತಮ ರನ್ ಗಳಿಸಿ ಭರವಸೆ ಮೂಡಿಸಿದ್ದರು, ಆದರೆ ತಂಡದ ಮೊತ್ತ 33 ರನ್ ಗಳಿಸಿದ್ದ ಸಂದರ್ಭದಲ್ಲಿ ಕರಣರತ್ನೆ ಎಸೆದ ಚೆಂಡನ್ನು ಅರಿಯುವಲ್ಲಿ ವಿಫಲವಾದ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ಗೆ ಕ್ಯಾಚ್ ನೀಡಿದರು.

ನಾಯಕ ರೋಹಿತ್ ನಿರ್ಗಮಿಸಿದ ನಂತರ ತಂಡದ ಮೊತ್ತಕ್ಕೆ 8 ರನ್ ಸೇರುವಷ್ಟರಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಲಹಿರು ಕುಮಾರಗೆ ವಿಕೆಟ್ ಒಪ್ಪಿಸಿದರು, ಕಳೆದ ಪಂದ್ಯದಲ್ಲಿ ದಾಖಲೆಯ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ ನಾಲ್ಕು ರನ್ ಗಳಿಸಿ ಲಹಿರುಗೆ ಕ್ಲೀನ್ ಬೌಲ್ಡ್ ಆದರು.

ನಂತರ ಜೊತೆಯಾದ ಶ್ರೇಯಸ್ ಅಯ್ಯರ್ ಹಾಗೂ ಕೆ. ಎಲ್. ರಾಹುಲ್ ಜೋಡಿ ಎಚ್ಚರಿಕೆಯಿಂದ ರನ್ ಕಲೆಹಾಕುತ್ತಿದ್ದ ಸಂದರ್ಭದಲ್ಲಿ ಶ್ರೇಯಸ್ ಅಯ್ಯರ್ (28) ರಜಿತಾ ಬೀಸಿದ ಎಲ್ ಬಿ ಬಲೆಗೆ ಬಿದ್ದರು, 86 ರನ್‌ಗಳಿಸಿ 4 ವಿಕೆಟ್ ಕಳೆದುಕೊಂಡು ಭಾರತ ತಂಡ ಸಂಕಷ್ಟಕ್ಕೆ ಸಿಲುಕಿತ್ತು.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಒಂದಾದ ಕೆ. ಎಲ್. ರಾಹುಲ್ ನಾಲ್ಕು ಬೌಂಡರಿ ಗಳಿಸಿ (64) ಹಾಗೂ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಾಲ್ಕು ಬೌಂಡರಿ ಬಾರಿಸಿ (36) ರನ್ ಗಳಿಸಿ ಉತ್ತಮ ಜೊತೆಯಾಟದೊಂದಿಗೆ 75 ರನ್ ಗಳಿಸಿ ತಂಡವನ್ನು ಗೆಲುವಿನ ಕಡೆ ಕೊಂಡೊಯ್ದುರು.

ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಹಾರ್ದಿಕ್ ಪಾಂಡ್ಯ ಕರುಣಾರತ್ನೆಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಆಲ್ ರೌಂಡರ್ ಅಕ್ಷರ್ ಪಟೇಲ್ (21) ಹಾಗೂ ಬೌಲಿಂಗ್ ನಲ್ಲಿ ಮಿಂಚಿದ್ದ ಕುಲದೀಪ್ ಎರಡು ಬೌಂಡರಿ ಬಾರಿಸಿ (10) ರನ್ ಗಳಿಸಿ ರಾಹುಲ್ ಜೊತೆಗೆ ಗೆಲುವಿನ ದಡ ಸೇರಿಸುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

12 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

24 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago