ರಾಹುಲ್-ಹಾರ್ದಿಕ್ ಜೊತೆಯಾಟಕ್ಕೆ ಒಲಿದ ಏಕದಿನ ಸರಣಿ!

 

ಕೊಲ್ಕತ್ತಾ: ಹೂಗ್ಲಿ ನದಿಯ ದಡದಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಎರಡು ತಂಡಗಳ ಬೌಲರ್ ಗಳು ಪಾರಮ್ಯದ ನಡುವೆಯೂ ಸಹ ಕನ್ನಡಿಗ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಉತ್ತಮ ಜೊತೆಯಾಟದಿಂದಾಗಿ ಭಾರತ ಏಕದಿನ ಸರಣಿಯನ್ನು ತನ್ನದಾಗಿಸಿಕೊಳ್ಳವ ಮೂಲಕ 2-0 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡದ ಆರಂಭ ಉತ್ತಮವಾಗಿತ್ತು, ಪದಾರ್ಪಣೆ ಪಂದ್ಯವಾಡಿದ ನವನಿಂದು ಫರ್ನಾಂಡೊ (50) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಆವಿಶ್ಕೋ ಫರ್ನಾಂಡೊ (20) ರನ್ ಗಳಿಸಿದ್ದ ಸಂದರ್ಭದಲ್ಲಿ ಮಹಮ್ಮದ್ ಸಿರಾಜ್ ವಿಕೆಟ್ ಉರುಳಿಸಿ ಆಘಾತ ನೀಡಿದರು.

ನಂತರ ಬಂದ ಕುಶಾಲ್ ಮೆಂಡಿಸ್ (34) ರನ್ ಗಳಿಸಿದರೆ ಕೆಳಕ್ರಮಾಂಕದ ಆಟಗಾರ ವೆಲ್ಲಾಗೆ (32) ರನ್ ಗಳಿಸುವ ಮೂಲಕ ತಂಡದ ಮೊತ್ತ 200 ರನ್ ಗಡಿ ದಾಟಿಸಿದರು, ವನಿಂದು ಹಸರಂಗ, ಕರುಣಾರತ್ನೆ ಹಾಗೂ ಬೌಲರ್ ರಜಿತ ತಂಡಕ್ಕೆ ಅತ್ಯಲ್ಪ ಕಾಣಿಕೆ ನೀಡಿದರು.

ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಮಹಮ್ಮದ್ ಸಿರಾಜ್ ತಲಾ ಮೂರು ವಿಕೆಟ್ ಪಡೆದು ಪ್ರವಾಸಿ ತಂಡಕ್ಕೆ ಆಘಾತ ನೀಡಿದರು, ವೇಗದ ಬೌಲಿಂಗ್ ಮೂಲಕ ಪ್ರವಾಸಿ ಪಡೆಯನ್ನು ಕಾಡಿದ ಉಮ್ರಾನ್ ಮಲ್ಲಿಕ್ ಎರಡು ವಿಕೆಟ್ ಹಾಗೂ ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು.

216 ರನ್ ಗಳ ಗುರಿ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ಉತ್ತಮ ರನ್ ಗಳಿಸಿ ಭರವಸೆ ಮೂಡಿಸಿದ್ದರು, ಆದರೆ ತಂಡದ ಮೊತ್ತ 33 ರನ್ ಗಳಿಸಿದ್ದ ಸಂದರ್ಭದಲ್ಲಿ ಕರಣರತ್ನೆ ಎಸೆದ ಚೆಂಡನ್ನು ಅರಿಯುವಲ್ಲಿ ವಿಫಲವಾದ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ಗೆ ಕ್ಯಾಚ್ ನೀಡಿದರು.

ನಾಯಕ ರೋಹಿತ್ ನಿರ್ಗಮಿಸಿದ ನಂತರ ತಂಡದ ಮೊತ್ತಕ್ಕೆ 8 ರನ್ ಸೇರುವಷ್ಟರಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಲಹಿರು ಕುಮಾರಗೆ ವಿಕೆಟ್ ಒಪ್ಪಿಸಿದರು, ಕಳೆದ ಪಂದ್ಯದಲ್ಲಿ ದಾಖಲೆಯ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ ನಾಲ್ಕು ರನ್ ಗಳಿಸಿ ಲಹಿರುಗೆ ಕ್ಲೀನ್ ಬೌಲ್ಡ್ ಆದರು.

ನಂತರ ಜೊತೆಯಾದ ಶ್ರೇಯಸ್ ಅಯ್ಯರ್ ಹಾಗೂ ಕೆ. ಎಲ್. ರಾಹುಲ್ ಜೋಡಿ ಎಚ್ಚರಿಕೆಯಿಂದ ರನ್ ಕಲೆಹಾಕುತ್ತಿದ್ದ ಸಂದರ್ಭದಲ್ಲಿ ಶ್ರೇಯಸ್ ಅಯ್ಯರ್ (28) ರಜಿತಾ ಬೀಸಿದ ಎಲ್ ಬಿ ಬಲೆಗೆ ಬಿದ್ದರು, 86 ರನ್‌ಗಳಿಸಿ 4 ವಿಕೆಟ್ ಕಳೆದುಕೊಂಡು ಭಾರತ ತಂಡ ಸಂಕಷ್ಟಕ್ಕೆ ಸಿಲುಕಿತ್ತು.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಒಂದಾದ ಕೆ. ಎಲ್. ರಾಹುಲ್ ನಾಲ್ಕು ಬೌಂಡರಿ ಗಳಿಸಿ (64) ಹಾಗೂ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಾಲ್ಕು ಬೌಂಡರಿ ಬಾರಿಸಿ (36) ರನ್ ಗಳಿಸಿ ಉತ್ತಮ ಜೊತೆಯಾಟದೊಂದಿಗೆ 75 ರನ್ ಗಳಿಸಿ ತಂಡವನ್ನು ಗೆಲುವಿನ ಕಡೆ ಕೊಂಡೊಯ್ದುರು.

ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಹಾರ್ದಿಕ್ ಪಾಂಡ್ಯ ಕರುಣಾರತ್ನೆಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಆಲ್ ರೌಂಡರ್ ಅಕ್ಷರ್ ಪಟೇಲ್ (21) ಹಾಗೂ ಬೌಲಿಂಗ್ ನಲ್ಲಿ ಮಿಂಚಿದ್ದ ಕುಲದೀಪ್ ಎರಡು ಬೌಂಡರಿ ಬಾರಿಸಿ (10) ರನ್ ಗಳಿಸಿ ರಾಹುಲ್ ಜೊತೆಗೆ ಗೆಲುವಿನ ದಡ ಸೇರಿಸುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

8 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

8 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

12 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

13 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

19 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

20 hours ago