ರಿಪೇರಿ ಹಣ ಪಡೆದಿದ್ದರೂ ಮಾಲೀಕರಿಗೆ ವಾಹನ ಹಿಂತಿರುಗಿಸದೇ ಮೀನಾಮೇಷ ಆರೋಪ: ಹೆಚ್ಚುವರಿ ಹಣ ಪಡೆಯಲು ವಾಹನ ಮಾಲೀಕರಿಗೆ ಕಿರುಕುಳ ಆರೋಪ:PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ಎದರು ಧರಣಿ

ರಸ್ತೆ ಅಪಘಾತಕ್ಕೆ ತುತ್ತಾಗಿದ್ದ ಗೂಡ್ಸ್ ಗಾಡಿಯ(ಕ್ಯಾಂಟರ್) ರಿಪೇರಿಗೆಂದು PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ನೀಡಲಾಗಿತ್ತು, ವಾಹನದ ರಿಪೇರಿ ಹಣವನ್ನ ಇನ್ಷುರೆನ್ಸ್ ಕಂಪನಿ ಬಿಡುಗಡೆ ಮಾಡಿತ್ತು, ಹಣ ಪಾವತಿಯಾಗಿದ್ದರು ವಾಹನ ಬಿಡುಗಡೆ ಮಾಡುವುದಕ್ಕೆ ಮೀನಾಮೇಷ ಎಣಿಸಿ ವಾಹನ ಮಾಲೀಕರಿಗೆ ನಷ್ಟವನ್ನುಂಟು ಮಾಡಲಾಗಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಕಂಪನಿಯ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕು ಕೆಸ್ತೂರ್ ಗೇಟ್ ಬಳಿ ಇರುವ PSN ಆಟೋಮೇಟಿವ್ ಮಾರ್ಕೆಟಿಂಗ್ ಕಂಪನಿ ಮುಂದೆ ನಡೆದಿದೆ.

ಗಾಡಿ ಮಾಲೀಕನ ಬಳಿ ಹೆಚ್ಚುವರಿ ಹಣದ ಬೇಡಿಕೆ ಇಟ್ಟ PSN ಕಂಪನಿ ಸಿಬ್ಬಂದಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬೆಂಗಳೂರಿನ ಸಿದ್ದಾರ್ಥ ನಗರದ ನಿವಾಸಿ ಅಶ್ವತ್ಥನಾರಾಯಣರವರು ಹರೀಶ್ ಕಾರ್ಗೋ ಮೂವರ್ಸ್ ಕಂಪನಿಯ ಮಾಲೀಕರು, ಇವರ ಮಾಲೀಕತ್ವದ ಕೆಎ02ಎಹೆಚ್ 8714 ನೋಂದಣಿ ಸಂಖ್ಯೆ ಗೂಡ್ಸ್ ವಾಹನ ಮೂರ್ಚ್ 29 ರಂದು ಪೆನಗೊಂಡ ಬಳಿ ಅಪಘಾತಕ್ಕೆ ತುತ್ತಾಗಿತ್ತು. ಈ ಹಿನ್ನೆಲೆ ಅದೇ ದಿನ ರಿಪೇರಿ ಮಾಡಿಸಲು ದೊಡ್ಡಬಳ್ಳಾಪುರದ ಕೆಸ್ತೂರ್ ಗೇಟ್ ಬಳಿಯ PSN ಅಟೋಮೇಟಿವ್ ಮಾರ್ಕೆಟಿಂಗ್ ಕಂಪನಿಯಲ್ಲಿ ಬಿಡಲಾಗಿತು.

ವಾಹನದ ರಿಪೇರಿಯ ಸುಮಾರು 5 ಲಕ್ಷ ಹಣವನ್ನ ಓರಿಯಂಟಲ್ ಇನ್ಷುರೆನ್ಸ್ ಕಂಪನಿ ಆನ್ ಲೈನ್ ಮೂಲಕವೇ PSN ಕಂಪನಿಗೆ ಪಾವತಿ ಮಾಡಿದೆ. ಕಂಪನಿಗೆ ಹಣ ಪಾವತಿಯಾದರೂ ಮಾಲೀಕರಿಂದ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟು ಮಾಲೀಕರಿಗೆ ವಂಚನೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

PSN ಕಂಪನಿ ಮ್ಯಾನೇಜರ್ ಯುವರಾಜ್ ಹಾಗೂ ಜನರಲ್ ಮ್ಯಾನೇಜರ್ ಸುದರ್ಶನ್ 34 ಸಾವಿರ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಾರೆ ವಾಹನ ಕೊಡುವುದಿಲ್ಲವೆಂದು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಅಶ್ವತ್ಥನಾರಾಯಣ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

PSN ಕಂಪನಿ ಸಿಬ್ಬಂದಿ ದೌರ್ಜನ್ಯ ಹಾಗೂ ಕಿರುಕುಳ ವಿರೋಧಿಸಿ ಕನ್ನಡಪರ ಸಂಘಟನಗಳು ಕಂಪನಿ ಮುಂದೆ ಪ್ರತಿಭಟನೆಯನ್ನ ನಡೆಸಿದವು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ರಘುವರ್ಮಾ, ಕಳೆದ ಎರಡು ತಿಂಗಳಿಂದ ಅಶ್ವತ್ಥನಾರಾಯಣರವರ ಗಾಡಿಯನ್ನ ಕೊಡದೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದಾರೆ, ಇನ್ಷುರೆನ್ಸ್ ಕಂಪನಿಯಿಂದ ಹಣ ಪಾವತಿಯಾಗಿದ್ರು ಹಣ ಬಂದಿಲ್ಲ ಎಂದು ಸುಳ್ಳು ಹೇಳಿ ಗೂಡ್ಸ್ ಮಾಲೀಕರಿಗೆ ಎರಡು ತಿಂಗಳ ಆದಾಯಕ್ಕೆ ಕನ್ನ ಹಾಕಿದ್ದಾರೆ, ಎರಡು ತಿಂಗಳಿಂದ ಸುಮಾರು 90 ಹಣ ನಷ್ಟವನ್ನ ಅನುಭವಿಸಿದ್ದಾರೆ ಅಶ್ವತ್ಥನಾರಾಯಣರವರು, ಅವರಿಗಾದ ನಷ್ಟವನ್ನ ತುಂಬಿಕೊಡಬೇಕು ಮತ್ತು PSN ಕಂಪನಿ ಸಿಬ್ಬಂದಿಗಳಾದ ಯುವರಾಜ್ ಮತ್ತು ಸುದರ್ಶನ್ ಗೂಡ್ಸ್ ಮಾಲೀಕರ ಬಳಿ ಕ್ಷಮೆ ಕೇಳಿ ಬೇಕೆಂದು ಒತ್ತಾಯಿಸಿದರು.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

14 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

1 hour ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago