ರಿಪೇರಿ ಹಣ ಪಡೆದಿದ್ದರೂ ಮಾಲೀಕರಿಗೆ ವಾಹನ ಹಿಂತಿರುಗಿಸದೇ ಮೀನಾಮೇಷ ಆರೋಪ: ಹೆಚ್ಚುವರಿ ಹಣ ಪಡೆಯಲು ವಾಹನ ಮಾಲೀಕರಿಗೆ ಕಿರುಕುಳ ಆರೋಪ:PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ಎದರು ಧರಣಿ

ರಸ್ತೆ ಅಪಘಾತಕ್ಕೆ ತುತ್ತಾಗಿದ್ದ ಗೂಡ್ಸ್ ಗಾಡಿಯ(ಕ್ಯಾಂಟರ್) ರಿಪೇರಿಗೆಂದು PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ನೀಡಲಾಗಿತ್ತು, ವಾಹನದ ರಿಪೇರಿ ಹಣವನ್ನ ಇನ್ಷುರೆನ್ಸ್ ಕಂಪನಿ ಬಿಡುಗಡೆ ಮಾಡಿತ್ತು, ಹಣ ಪಾವತಿಯಾಗಿದ್ದರು ವಾಹನ ಬಿಡುಗಡೆ ಮಾಡುವುದಕ್ಕೆ ಮೀನಾಮೇಷ ಎಣಿಸಿ ವಾಹನ ಮಾಲೀಕರಿಗೆ ನಷ್ಟವನ್ನುಂಟು ಮಾಡಲಾಗಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಕಂಪನಿಯ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕು ಕೆಸ್ತೂರ್ ಗೇಟ್ ಬಳಿ ಇರುವ PSN ಆಟೋಮೇಟಿವ್ ಮಾರ್ಕೆಟಿಂಗ್ ಕಂಪನಿ ಮುಂದೆ ನಡೆದಿದೆ.

ಗಾಡಿ ಮಾಲೀಕನ ಬಳಿ ಹೆಚ್ಚುವರಿ ಹಣದ ಬೇಡಿಕೆ ಇಟ್ಟ PSN ಕಂಪನಿ ಸಿಬ್ಬಂದಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬೆಂಗಳೂರಿನ ಸಿದ್ದಾರ್ಥ ನಗರದ ನಿವಾಸಿ ಅಶ್ವತ್ಥನಾರಾಯಣರವರು ಹರೀಶ್ ಕಾರ್ಗೋ ಮೂವರ್ಸ್ ಕಂಪನಿಯ ಮಾಲೀಕರು, ಇವರ ಮಾಲೀಕತ್ವದ ಕೆಎ02ಎಹೆಚ್ 8714 ನೋಂದಣಿ ಸಂಖ್ಯೆ ಗೂಡ್ಸ್ ವಾಹನ ಮೂರ್ಚ್ 29 ರಂದು ಪೆನಗೊಂಡ ಬಳಿ ಅಪಘಾತಕ್ಕೆ ತುತ್ತಾಗಿತ್ತು. ಈ ಹಿನ್ನೆಲೆ ಅದೇ ದಿನ ರಿಪೇರಿ ಮಾಡಿಸಲು ದೊಡ್ಡಬಳ್ಳಾಪುರದ ಕೆಸ್ತೂರ್ ಗೇಟ್ ಬಳಿಯ PSN ಅಟೋಮೇಟಿವ್ ಮಾರ್ಕೆಟಿಂಗ್ ಕಂಪನಿಯಲ್ಲಿ ಬಿಡಲಾಗಿತು.

ವಾಹನದ ರಿಪೇರಿಯ ಸುಮಾರು 5 ಲಕ್ಷ ಹಣವನ್ನ ಓರಿಯಂಟಲ್ ಇನ್ಷುರೆನ್ಸ್ ಕಂಪನಿ ಆನ್ ಲೈನ್ ಮೂಲಕವೇ PSN ಕಂಪನಿಗೆ ಪಾವತಿ ಮಾಡಿದೆ. ಕಂಪನಿಗೆ ಹಣ ಪಾವತಿಯಾದರೂ ಮಾಲೀಕರಿಂದ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟು ಮಾಲೀಕರಿಗೆ ವಂಚನೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

PSN ಕಂಪನಿ ಮ್ಯಾನೇಜರ್ ಯುವರಾಜ್ ಹಾಗೂ ಜನರಲ್ ಮ್ಯಾನೇಜರ್ ಸುದರ್ಶನ್ 34 ಸಾವಿರ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಾರೆ ವಾಹನ ಕೊಡುವುದಿಲ್ಲವೆಂದು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಅಶ್ವತ್ಥನಾರಾಯಣ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

PSN ಕಂಪನಿ ಸಿಬ್ಬಂದಿ ದೌರ್ಜನ್ಯ ಹಾಗೂ ಕಿರುಕುಳ ವಿರೋಧಿಸಿ ಕನ್ನಡಪರ ಸಂಘಟನಗಳು ಕಂಪನಿ ಮುಂದೆ ಪ್ರತಿಭಟನೆಯನ್ನ ನಡೆಸಿದವು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ರಘುವರ್ಮಾ, ಕಳೆದ ಎರಡು ತಿಂಗಳಿಂದ ಅಶ್ವತ್ಥನಾರಾಯಣರವರ ಗಾಡಿಯನ್ನ ಕೊಡದೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದಾರೆ, ಇನ್ಷುರೆನ್ಸ್ ಕಂಪನಿಯಿಂದ ಹಣ ಪಾವತಿಯಾಗಿದ್ರು ಹಣ ಬಂದಿಲ್ಲ ಎಂದು ಸುಳ್ಳು ಹೇಳಿ ಗೂಡ್ಸ್ ಮಾಲೀಕರಿಗೆ ಎರಡು ತಿಂಗಳ ಆದಾಯಕ್ಕೆ ಕನ್ನ ಹಾಕಿದ್ದಾರೆ, ಎರಡು ತಿಂಗಳಿಂದ ಸುಮಾರು 90 ಹಣ ನಷ್ಟವನ್ನ ಅನುಭವಿಸಿದ್ದಾರೆ ಅಶ್ವತ್ಥನಾರಾಯಣರವರು, ಅವರಿಗಾದ ನಷ್ಟವನ್ನ ತುಂಬಿಕೊಡಬೇಕು ಮತ್ತು PSN ಕಂಪನಿ ಸಿಬ್ಬಂದಿಗಳಾದ ಯುವರಾಜ್ ಮತ್ತು ಸುದರ್ಶನ್ ಗೂಡ್ಸ್ ಮಾಲೀಕರ ಬಳಿ ಕ್ಷಮೆ ಕೇಳಿ ಬೇಕೆಂದು ಒತ್ತಾಯಿಸಿದರು.

Ramesh Babu

Journalist

Recent Posts

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

7 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 day ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

1 day ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago