ರಿಪೇರಿ ಹಣ ಪಡೆದಿದ್ದರೂ ಮಾಲೀಕರಿಗೆ ವಾಹನ ಹಿಂತಿರುಗಿಸದೇ ಮೀನಾಮೇಷ ಆರೋಪ: ಹೆಚ್ಚುವರಿ ಹಣ ಪಡೆಯಲು ವಾಹನ ಮಾಲೀಕರಿಗೆ ಕಿರುಕುಳ ಆರೋಪ:PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ಎದರು ಧರಣಿ

ರಸ್ತೆ ಅಪಘಾತಕ್ಕೆ ತುತ್ತಾಗಿದ್ದ ಗೂಡ್ಸ್ ಗಾಡಿಯ(ಕ್ಯಾಂಟರ್) ರಿಪೇರಿಗೆಂದು PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ನೀಡಲಾಗಿತ್ತು, ವಾಹನದ ರಿಪೇರಿ ಹಣವನ್ನ ಇನ್ಷುರೆನ್ಸ್ ಕಂಪನಿ ಬಿಡುಗಡೆ ಮಾಡಿತ್ತು, ಹಣ ಪಾವತಿಯಾಗಿದ್ದರು ವಾಹನ ಬಿಡುಗಡೆ ಮಾಡುವುದಕ್ಕೆ ಮೀನಾಮೇಷ ಎಣಿಸಿ ವಾಹನ ಮಾಲೀಕರಿಗೆ ನಷ್ಟವನ್ನುಂಟು ಮಾಡಲಾಗಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಕಂಪನಿಯ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕು ಕೆಸ್ತೂರ್ ಗೇಟ್ ಬಳಿ ಇರುವ PSN ಆಟೋಮೇಟಿವ್ ಮಾರ್ಕೆಟಿಂಗ್ ಕಂಪನಿ ಮುಂದೆ ನಡೆದಿದೆ.

ಗಾಡಿ ಮಾಲೀಕನ ಬಳಿ ಹೆಚ್ಚುವರಿ ಹಣದ ಬೇಡಿಕೆ ಇಟ್ಟ PSN ಕಂಪನಿ ಸಿಬ್ಬಂದಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬೆಂಗಳೂರಿನ ಸಿದ್ದಾರ್ಥ ನಗರದ ನಿವಾಸಿ ಅಶ್ವತ್ಥನಾರಾಯಣರವರು ಹರೀಶ್ ಕಾರ್ಗೋ ಮೂವರ್ಸ್ ಕಂಪನಿಯ ಮಾಲೀಕರು, ಇವರ ಮಾಲೀಕತ್ವದ ಕೆಎ02ಎಹೆಚ್ 8714 ನೋಂದಣಿ ಸಂಖ್ಯೆ ಗೂಡ್ಸ್ ವಾಹನ ಮೂರ್ಚ್ 29 ರಂದು ಪೆನಗೊಂಡ ಬಳಿ ಅಪಘಾತಕ್ಕೆ ತುತ್ತಾಗಿತ್ತು. ಈ ಹಿನ್ನೆಲೆ ಅದೇ ದಿನ ರಿಪೇರಿ ಮಾಡಿಸಲು ದೊಡ್ಡಬಳ್ಳಾಪುರದ ಕೆಸ್ತೂರ್ ಗೇಟ್ ಬಳಿಯ PSN ಅಟೋಮೇಟಿವ್ ಮಾರ್ಕೆಟಿಂಗ್ ಕಂಪನಿಯಲ್ಲಿ ಬಿಡಲಾಗಿತು.

ವಾಹನದ ರಿಪೇರಿಯ ಸುಮಾರು 5 ಲಕ್ಷ ಹಣವನ್ನ ಓರಿಯಂಟಲ್ ಇನ್ಷುರೆನ್ಸ್ ಕಂಪನಿ ಆನ್ ಲೈನ್ ಮೂಲಕವೇ PSN ಕಂಪನಿಗೆ ಪಾವತಿ ಮಾಡಿದೆ. ಕಂಪನಿಗೆ ಹಣ ಪಾವತಿಯಾದರೂ ಮಾಲೀಕರಿಂದ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟು ಮಾಲೀಕರಿಗೆ ವಂಚನೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

PSN ಕಂಪನಿ ಮ್ಯಾನೇಜರ್ ಯುವರಾಜ್ ಹಾಗೂ ಜನರಲ್ ಮ್ಯಾನೇಜರ್ ಸುದರ್ಶನ್ 34 ಸಾವಿರ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಾರೆ ವಾಹನ ಕೊಡುವುದಿಲ್ಲವೆಂದು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಅಶ್ವತ್ಥನಾರಾಯಣ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

PSN ಕಂಪನಿ ಸಿಬ್ಬಂದಿ ದೌರ್ಜನ್ಯ ಹಾಗೂ ಕಿರುಕುಳ ವಿರೋಧಿಸಿ ಕನ್ನಡಪರ ಸಂಘಟನಗಳು ಕಂಪನಿ ಮುಂದೆ ಪ್ರತಿಭಟನೆಯನ್ನ ನಡೆಸಿದವು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ರಘುವರ್ಮಾ, ಕಳೆದ ಎರಡು ತಿಂಗಳಿಂದ ಅಶ್ವತ್ಥನಾರಾಯಣರವರ ಗಾಡಿಯನ್ನ ಕೊಡದೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದಾರೆ, ಇನ್ಷುರೆನ್ಸ್ ಕಂಪನಿಯಿಂದ ಹಣ ಪಾವತಿಯಾಗಿದ್ರು ಹಣ ಬಂದಿಲ್ಲ ಎಂದು ಸುಳ್ಳು ಹೇಳಿ ಗೂಡ್ಸ್ ಮಾಲೀಕರಿಗೆ ಎರಡು ತಿಂಗಳ ಆದಾಯಕ್ಕೆ ಕನ್ನ ಹಾಕಿದ್ದಾರೆ, ಎರಡು ತಿಂಗಳಿಂದ ಸುಮಾರು 90 ಹಣ ನಷ್ಟವನ್ನ ಅನುಭವಿಸಿದ್ದಾರೆ ಅಶ್ವತ್ಥನಾರಾಯಣರವರು, ಅವರಿಗಾದ ನಷ್ಟವನ್ನ ತುಂಬಿಕೊಡಬೇಕು ಮತ್ತು PSN ಕಂಪನಿ ಸಿಬ್ಬಂದಿಗಳಾದ ಯುವರಾಜ್ ಮತ್ತು ಸುದರ್ಶನ್ ಗೂಡ್ಸ್ ಮಾಲೀಕರ ಬಳಿ ಕ್ಷಮೆ ಕೇಳಿ ಬೇಕೆಂದು ಒತ್ತಾಯಿಸಿದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

11 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

20 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

21 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago