ರಿಪೇರಿ ಹಣ ಪಡೆದಿದ್ದರೂ ಮಾಲೀಕರಿಗೆ ವಾಹನ ಹಿಂತಿರುಗಿಸದೇ ಮೀನಾಮೇಷ ಆರೋಪ: ಹೆಚ್ಚುವರಿ ಹಣ ಪಡೆಯಲು ವಾಹನ ಮಾಲೀಕರಿಗೆ ಕಿರುಕುಳ ಆರೋಪ:PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ಎದರು ಧರಣಿ

ರಸ್ತೆ ಅಪಘಾತಕ್ಕೆ ತುತ್ತಾಗಿದ್ದ ಗೂಡ್ಸ್ ಗಾಡಿಯ(ಕ್ಯಾಂಟರ್) ರಿಪೇರಿಗೆಂದು PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ನೀಡಲಾಗಿತ್ತು, ವಾಹನದ ರಿಪೇರಿ ಹಣವನ್ನ ಇನ್ಷುರೆನ್ಸ್ ಕಂಪನಿ ಬಿಡುಗಡೆ ಮಾಡಿತ್ತು, ಹಣ ಪಾವತಿಯಾಗಿದ್ದರು ವಾಹನ ಬಿಡುಗಡೆ ಮಾಡುವುದಕ್ಕೆ ಮೀನಾಮೇಷ ಎಣಿಸಿ ವಾಹನ ಮಾಲೀಕರಿಗೆ ನಷ್ಟವನ್ನುಂಟು ಮಾಡಲಾಗಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಕಂಪನಿಯ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕು ಕೆಸ್ತೂರ್ ಗೇಟ್ ಬಳಿ ಇರುವ PSN ಆಟೋಮೇಟಿವ್ ಮಾರ್ಕೆಟಿಂಗ್ ಕಂಪನಿ ಮುಂದೆ ನಡೆದಿದೆ.

ಗಾಡಿ ಮಾಲೀಕನ ಬಳಿ ಹೆಚ್ಚುವರಿ ಹಣದ ಬೇಡಿಕೆ ಇಟ್ಟ PSN ಕಂಪನಿ ಸಿಬ್ಬಂದಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬೆಂಗಳೂರಿನ ಸಿದ್ದಾರ್ಥ ನಗರದ ನಿವಾಸಿ ಅಶ್ವತ್ಥನಾರಾಯಣರವರು ಹರೀಶ್ ಕಾರ್ಗೋ ಮೂವರ್ಸ್ ಕಂಪನಿಯ ಮಾಲೀಕರು, ಇವರ ಮಾಲೀಕತ್ವದ ಕೆಎ02ಎಹೆಚ್ 8714 ನೋಂದಣಿ ಸಂಖ್ಯೆ ಗೂಡ್ಸ್ ವಾಹನ ಮೂರ್ಚ್ 29 ರಂದು ಪೆನಗೊಂಡ ಬಳಿ ಅಪಘಾತಕ್ಕೆ ತುತ್ತಾಗಿತ್ತು. ಈ ಹಿನ್ನೆಲೆ ಅದೇ ದಿನ ರಿಪೇರಿ ಮಾಡಿಸಲು ದೊಡ್ಡಬಳ್ಳಾಪುರದ ಕೆಸ್ತೂರ್ ಗೇಟ್ ಬಳಿಯ PSN ಅಟೋಮೇಟಿವ್ ಮಾರ್ಕೆಟಿಂಗ್ ಕಂಪನಿಯಲ್ಲಿ ಬಿಡಲಾಗಿತು.

ವಾಹನದ ರಿಪೇರಿಯ ಸುಮಾರು 5 ಲಕ್ಷ ಹಣವನ್ನ ಓರಿಯಂಟಲ್ ಇನ್ಷುರೆನ್ಸ್ ಕಂಪನಿ ಆನ್ ಲೈನ್ ಮೂಲಕವೇ PSN ಕಂಪನಿಗೆ ಪಾವತಿ ಮಾಡಿದೆ. ಕಂಪನಿಗೆ ಹಣ ಪಾವತಿಯಾದರೂ ಮಾಲೀಕರಿಂದ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟು ಮಾಲೀಕರಿಗೆ ವಂಚನೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

PSN ಕಂಪನಿ ಮ್ಯಾನೇಜರ್ ಯುವರಾಜ್ ಹಾಗೂ ಜನರಲ್ ಮ್ಯಾನೇಜರ್ ಸುದರ್ಶನ್ 34 ಸಾವಿರ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಾರೆ ವಾಹನ ಕೊಡುವುದಿಲ್ಲವೆಂದು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಅಶ್ವತ್ಥನಾರಾಯಣ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

PSN ಕಂಪನಿ ಸಿಬ್ಬಂದಿ ದೌರ್ಜನ್ಯ ಹಾಗೂ ಕಿರುಕುಳ ವಿರೋಧಿಸಿ ಕನ್ನಡಪರ ಸಂಘಟನಗಳು ಕಂಪನಿ ಮುಂದೆ ಪ್ರತಿಭಟನೆಯನ್ನ ನಡೆಸಿದವು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ರಘುವರ್ಮಾ, ಕಳೆದ ಎರಡು ತಿಂಗಳಿಂದ ಅಶ್ವತ್ಥನಾರಾಯಣರವರ ಗಾಡಿಯನ್ನ ಕೊಡದೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದಾರೆ, ಇನ್ಷುರೆನ್ಸ್ ಕಂಪನಿಯಿಂದ ಹಣ ಪಾವತಿಯಾಗಿದ್ರು ಹಣ ಬಂದಿಲ್ಲ ಎಂದು ಸುಳ್ಳು ಹೇಳಿ ಗೂಡ್ಸ್ ಮಾಲೀಕರಿಗೆ ಎರಡು ತಿಂಗಳ ಆದಾಯಕ್ಕೆ ಕನ್ನ ಹಾಕಿದ್ದಾರೆ, ಎರಡು ತಿಂಗಳಿಂದ ಸುಮಾರು 90 ಹಣ ನಷ್ಟವನ್ನ ಅನುಭವಿಸಿದ್ದಾರೆ ಅಶ್ವತ್ಥನಾರಾಯಣರವರು, ಅವರಿಗಾದ ನಷ್ಟವನ್ನ ತುಂಬಿಕೊಡಬೇಕು ಮತ್ತು PSN ಕಂಪನಿ ಸಿಬ್ಬಂದಿಗಳಾದ ಯುವರಾಜ್ ಮತ್ತು ಸುದರ್ಶನ್ ಗೂಡ್ಸ್ ಮಾಲೀಕರ ಬಳಿ ಕ್ಷಮೆ ಕೇಳಿ ಬೇಕೆಂದು ಒತ್ತಾಯಿಸಿದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago