ರಸ್ತೆ ಅಪಘಾತಕ್ಕೆ ತುತ್ತಾಗಿದ್ದ ಗೂಡ್ಸ್ ಗಾಡಿಯ(ಕ್ಯಾಂಟರ್) ರಿಪೇರಿಗೆಂದು PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ನೀಡಲಾಗಿತ್ತು, ವಾಹನದ ರಿಪೇರಿ ಹಣವನ್ನ ಇನ್ಷುರೆನ್ಸ್ ಕಂಪನಿ ಬಿಡುಗಡೆ ಮಾಡಿತ್ತು, ಹಣ ಪಾವತಿಯಾಗಿದ್ದರು ವಾಹನ ಬಿಡುಗಡೆ ಮಾಡುವುದಕ್ಕೆ ಮೀನಾಮೇಷ ಎಣಿಸಿ ವಾಹನ ಮಾಲೀಕರಿಗೆ ನಷ್ಟವನ್ನುಂಟು ಮಾಡಲಾಗಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಕಂಪನಿಯ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕು ಕೆಸ್ತೂರ್ ಗೇಟ್ ಬಳಿ ಇರುವ PSN ಆಟೋಮೇಟಿವ್ ಮಾರ್ಕೆಟಿಂಗ್ ಕಂಪನಿ ಮುಂದೆ ನಡೆದಿದೆ.
ಗಾಡಿ ಮಾಲೀಕನ ಬಳಿ ಹೆಚ್ಚುವರಿ ಹಣದ ಬೇಡಿಕೆ ಇಟ್ಟ PSN ಕಂಪನಿ ಸಿಬ್ಬಂದಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬೆಂಗಳೂರಿನ ಸಿದ್ದಾರ್ಥ ನಗರದ ನಿವಾಸಿ ಅಶ್ವತ್ಥನಾರಾಯಣರವರು ಹರೀಶ್ ಕಾರ್ಗೋ ಮೂವರ್ಸ್ ಕಂಪನಿಯ ಮಾಲೀಕರು, ಇವರ ಮಾಲೀಕತ್ವದ ಕೆಎ02ಎಹೆಚ್ 8714 ನೋಂದಣಿ ಸಂಖ್ಯೆ ಗೂಡ್ಸ್ ವಾಹನ ಮೂರ್ಚ್ 29 ರಂದು ಪೆನಗೊಂಡ ಬಳಿ ಅಪಘಾತಕ್ಕೆ ತುತ್ತಾಗಿತ್ತು. ಈ ಹಿನ್ನೆಲೆ ಅದೇ ದಿನ ರಿಪೇರಿ ಮಾಡಿಸಲು ದೊಡ್ಡಬಳ್ಳಾಪುರದ ಕೆಸ್ತೂರ್ ಗೇಟ್ ಬಳಿಯ PSN ಅಟೋಮೇಟಿವ್ ಮಾರ್ಕೆಟಿಂಗ್ ಕಂಪನಿಯಲ್ಲಿ ಬಿಡಲಾಗಿತು.
ವಾಹನದ ರಿಪೇರಿಯ ಸುಮಾರು 5 ಲಕ್ಷ ಹಣವನ್ನ ಓರಿಯಂಟಲ್ ಇನ್ಷುರೆನ್ಸ್ ಕಂಪನಿ ಆನ್ ಲೈನ್ ಮೂಲಕವೇ PSN ಕಂಪನಿಗೆ ಪಾವತಿ ಮಾಡಿದೆ. ಕಂಪನಿಗೆ ಹಣ ಪಾವತಿಯಾದರೂ ಮಾಲೀಕರಿಂದ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟು ಮಾಲೀಕರಿಗೆ ವಂಚನೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
PSN ಕಂಪನಿ ಮ್ಯಾನೇಜರ್ ಯುವರಾಜ್ ಹಾಗೂ ಜನರಲ್ ಮ್ಯಾನೇಜರ್ ಸುದರ್ಶನ್ 34 ಸಾವಿರ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಾರೆ ವಾಹನ ಕೊಡುವುದಿಲ್ಲವೆಂದು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಅಶ್ವತ್ಥನಾರಾಯಣ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
PSN ಕಂಪನಿ ಸಿಬ್ಬಂದಿ ದೌರ್ಜನ್ಯ ಹಾಗೂ ಕಿರುಕುಳ ವಿರೋಧಿಸಿ ಕನ್ನಡಪರ ಸಂಘಟನಗಳು ಕಂಪನಿ ಮುಂದೆ ಪ್ರತಿಭಟನೆಯನ್ನ ನಡೆಸಿದವು.
ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ರಘುವರ್ಮಾ, ಕಳೆದ ಎರಡು ತಿಂಗಳಿಂದ ಅಶ್ವತ್ಥನಾರಾಯಣರವರ ಗಾಡಿಯನ್ನ ಕೊಡದೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದಾರೆ, ಇನ್ಷುರೆನ್ಸ್ ಕಂಪನಿಯಿಂದ ಹಣ ಪಾವತಿಯಾಗಿದ್ರು ಹಣ ಬಂದಿಲ್ಲ ಎಂದು ಸುಳ್ಳು ಹೇಳಿ ಗೂಡ್ಸ್ ಮಾಲೀಕರಿಗೆ ಎರಡು ತಿಂಗಳ ಆದಾಯಕ್ಕೆ ಕನ್ನ ಹಾಕಿದ್ದಾರೆ, ಎರಡು ತಿಂಗಳಿಂದ ಸುಮಾರು 90 ಹಣ ನಷ್ಟವನ್ನ ಅನುಭವಿಸಿದ್ದಾರೆ ಅಶ್ವತ್ಥನಾರಾಯಣರವರು, ಅವರಿಗಾದ ನಷ್ಟವನ್ನ ತುಂಬಿಕೊಡಬೇಕು ಮತ್ತು PSN ಕಂಪನಿ ಸಿಬ್ಬಂದಿಗಳಾದ ಯುವರಾಜ್ ಮತ್ತು ಸುದರ್ಶನ್ ಗೂಡ್ಸ್ ಮಾಲೀಕರ ಬಳಿ ಕ್ಷಮೆ ಕೇಳಿ ಬೇಕೆಂದು ಒತ್ತಾಯಿಸಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…